ಕರ್ನಾಟಕ

karnataka

ETV Bharat / state

ಸಮೀಕ್ಷೆ ನಡೆಸಿ, ಅರ್ಹರಿಗೆ ಪರಿಹಾರ ನೀಡಿ: ಗೋವಿಂದ ಕಾರಜೋಳ ಸೂಚನೆ - ಜಮಖಂಡಿ ತಹಶೀಲ್ದಾರ್​ ಕಚೇರಿ

ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆಗಳ ಕುರಿತು ನಿಷ್ಪಕ್ಷಪಾತವಾಗಿ ಸಮೀಕ್ಷೆ ನಡೆಸಿ, ಅರ್ಹ ಫಲಾನುಭವಿಗಳಿಗೆ ಪರಿಹಾರ ಒದಗಿಸಬೇಕು ಎಂದು ಡಿಸಿಎಂ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Deputy Chief Minister Govinda Karajola meeting with officials
ನಿಷ್ಪಕ್ಷಪಾತವಾಗಿ ಸಮೀಕ್ಷೆ ನಡೆಸಿ, ಅರ್ಹ ಫಲಾನುಭವಿಗಳಿಗೆ ಪರಿಹಾರ ನೀಡಿ: ಗೋವಿಂದ ಕಾರಜೋಳ

By

Published : Oct 24, 2020, 8:11 PM IST

ಬಾಗಲಕೋಟೆ:ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆಗಳ ಕುರಿತು ನಿಷ್ಪಕ್ಷಪಾತವಾಗಿ ಸಮೀಕ್ಷೆ ನಡೆಸಿ, ಅರ್ಹ ಫಲಾನುಭವಿಗಳಿಗೆ ಪರಿಹಾರ ಒದಗಿಸಬೇಕು. ಲೋಪ ಎಸೆಗಿದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನಿಷ್ಪಕ್ಷಪಾತವಾಗಿ ಸಮೀಕ್ಷೆ ನಡೆಸಿ, ಅರ್ಹ ಫಲಾನುಭವಿಗಳಿಗೆ ಪರಿಹಾರ ನೀಡಿ: ಗೋವಿಂದ ಕಾರಜೋಳ

ಜಮಖಂಡಿ ತಹಶೀಲ್ದಾರ್​ ಕಚೇರಿಯಲ್ಲಿಂದು ನಡೆದ ಅತಿವೃಷ್ಟಿ, ಪ್ರವಾಹದಿಂದಾದ ಹಾನಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ‌ ಪ್ರದೇಶದಲ್ಲಿ ನೂರಕ್ಕೆ ಶೇ.90 ರಷ್ಟು ಕಲ್ಲು ಮತ್ತು ಮಣ್ಣಿನಿಂದ ಕಟ್ಟಿದ ಮನೆಗಳಿವೆ. ಮಳೆ ನಿಂತ ಮೇಲೆಯೂ ಸಹ ಮನೆಗಳು ಬೀಳುವ ಸಾಧ್ಯತೆ ಇರುವುದರಿಂದ ಸಮೀಕ್ಷೆಯನ್ನು ನಿಖರವಾಗಿ ಮಾಡಬೇಕು. ಯಾವುದೇ ರೀತಿಯಲ್ಲಿ ಸಮೀಕ್ಷೆಯಿಂದ ಬಿಟ್ಟು ಹೋಗದಂತೆ ಕ್ರಮವಹಿಸಬೇಕು ಎಂದರು.

ಜನರು ಕೂಲಿ - ನಾಲಿ ಮಾಡಿಯಾದರೂ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ಆದರೆ, ಅವರಿಗೆ ಮನೆಯನ್ನು ಕಟ್ಟಿಕೊಳ್ಳುವ ಶಕ್ತಿ ಇಲ್ಲದಿರುವುದರಿಂದ ಎಚ್ವರಿಕೆ ವಹಿಸಿ ಸಮೀಕ್ಷೆ ಮಾಡಬೇಕು. ಪರಿಹಾರದಲ್ಲಿ ಲೋಪ ಕಂಡುಬಂದಲ್ಲಿ ಸ್ವತಃ ತಾವೇ ಹಾನಿ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದರು.


ABOUT THE AUTHOR

...view details