ಕರ್ನಾಟಕ

karnataka

ETV Bharat / state

ಬಿಜೆಪಿ-ಜೆಡಿಎಸ್‌ನಿಂದ ಷರತ್ತುಗಳಿಲ್ಲದೇ ಕಾಂಗ್ರೆಸ್‌ಗೆ​ ಸೇರಲು ಎಲ್ಲರಿಗೂ ಅವಕಾಶ : ಮಾಜಿ ಸಿಎಂ ಸಿದ್ದರಾಮಯ್ಯ - ಷರತ್ತುಗಳಿಲ್ಲದೇ ಕಾಂಗ್ರೆಸ್​ ಸೇರಿದರೆ ಸ್ವಾಗತ ಎಂದ ಸಿದ್ದರಾಮಯ್ಯ

ಕಾಂಗ್ರೆಸ್​ಗೆ ಸೇರಲು ಬಿಜೆಪಿ ಮತ್ತು ಜೆಡಿಎಸ್​ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರ ಹೆಸರು ಮಾತ್ರ ಹೇಳಲ್ಲ. ನಾವು ಯಾವಾಗಲೂ ಚುನಾವಣೆಗೆ ಸಿದ್ಧರಿದ್ದೇವೆ. ವಿಧಾನಸಭೆಗೂ ರೆಡಿ ಇದ್ದೇವೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್‌ಗೂ ಚುನಾವಣೆಗೂ ಸಿದ್ಧರಿದ್ದೇವೆ..

siddaramaiah
ಮಾಜಿ ಸಿಎಂ ಸಿದ್ದರಾಮಯ್ಯ

By

Published : Jan 25, 2022, 4:06 PM IST

Updated : Jan 25, 2022, 4:58 PM IST

ಬಾಗಲಕೋಟೆ :ಯಾರೇಪಕ್ಷ ಸೇರಿದರೂ ಸ್ವಾಗತ. ಆದರೆ, ಯಾವುದೇ ಷರತ್ತುಗಳು ಹಾಕುವಂತಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರಬೇಕು. ಇದಕ್ಕೆಲ್ಲಾ ಸಿದ್ಧವಾಗಿದ್ದರೆ ಮಾತ್ರ ಪಕ್ಷಕ್ಕೆ ಬರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ಗೆ ಸೇರಲು ಬಿಜೆಪಿ ಮತ್ತು ಜೆಡಿಎಸ್​ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರ ಹೆಸರು ಮಾತ್ರ ಹೇಳಲ್ಲ. ನಾವು ಯಾವಾಗಲೂ ಚುನಾವಣೆಗೆ ಸಿದ್ಧರಿದ್ದೇವೆ. ವಿಧಾನಸಭೆಗೂ ರೆಡಿ ಇದ್ದೇವೆ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆಗೂ ಸಿದ್ಧರಿದ್ದೇವೆ ಎಂದರು.

ಪಕ್ಷಾಂತರ ಪರ್ವ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ..

ಜಿಲ್ಲಾ ಉಸ್ತುವಾರಿ ಮಂತ್ರಿಗಳ ನೇಮಕ ವಿಚಾರವಾಗಿ ಪ್ರತಿಕ್ರಿಯಿಸಿ, ಈಗ ಅನೇಕ ಜಿಲ್ಲೆಗಳಲ್ಲಿ ಉಸ್ತುವಾರಿ ಮಂತ್ರಿಗಳಿದ್ರೂ, ಇಲ್ಲದಂಗೆ ಇದ್ದಾರೆ. ಉಸ್ತುವಾರಿಗಳು ಏನೂ ಕೆಲಸ ಮಾಡ್ತಿಲ್ಲ‌. ಅವರವರ ಕ್ಷೇತ್ರಕ್ಕೆ ಸೀಮಿತವಾಗಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸಲ್ಲ. ಹೀಗಾಗಿ, ಆಡಳಿತ ಸುಧಾರಿಸುತ್ತಿಲ್ಲ ಎಂದರು.

ಜನರ ಅಹವಾಲು ಸ್ವೀಕಾರ

ಇದಕ್ಕೂ ಮೊದಲು ಖಾಸಗಿ ಹೋಟೆಲ್​ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಕ್ಷೇತ್ರದ ವಿವಿಧ‌ ಪ್ರದೇಶಗಳಿಂದ ಆಗಮಿಸಿದ ಜನರು, ತಮ್ಮ ಸಮಸ್ಯೆಗಳನ್ನು ಬಗೆಹರಿಸಿ ಕೊಡುವಂತೆ ಮಾಜಿ ಸಿಎಂ ಬಳಿ ಮನವಿ ಮಾಡಿದರು. ಈ ವೇಳೆ ಸಿದ್ದರಾಮಯ್ಯನವರಿಗೆ ಹೂವಿನ ಹಾರ ಹಾಕಲು ಬಂದ ಅಭಿಮಾನಿಗಳಿಂದ ಹಾರ ತೆಗೆದುಕೊಂಡು ಮರಳಿ ಅವರಿಗೇ ಹಾಕಿ ಗಮನ ಸೆಳೆದರು.

ಸಿದ್ದು ಕಾಲಿಗೆ ಬಿದ್ದ ಸಂತ್ರಸ್ತ ಕುಟುಂಬ

ನಂತರ ನಡೆದ ಪರಿಹಾರ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಚೆಕ್​ ಪಡೆದ ಕುಟುಂಬವೊಂದು ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ನಮಸ್ಕರಿಸಿದರು. ಈ ವೇಳೆ ಸಿದ್ದರಾಮಯ್ಯ ಅವರನ್ನು ಕೈ ಹಿಡಿದು ಎತ್ತಿ 'ಏಯ್‌ ಏಳಯ್ಯಾ, ಕಾಲಿಗೆಲ್ಲಾ ಬೀಳಬಾರದು..' ಎಂದು ಹೇಳಿದರು.

ಇದನ್ನೂ ಓದಿ:ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ ಪಾಟೀಲ್ ನೇಮಕ

Last Updated : Jan 25, 2022, 4:58 PM IST

ABOUT THE AUTHOR

...view details