ಕರ್ನಾಟಕ

karnataka

'ಕನ್ನಡಿಗರು ಗೋವಾದಲ್ಲಿ ಸುರಕ್ಷಿತ': ಸಂಗಮೇಶ್ವರ ಮಹಾರಾಜರ ಪುಣ್ಯಸ್ಮರಣೆಯಲ್ಲಿ ಗೋವಾ ಸಿಎಂ

By

Published : Nov 15, 2022, 9:31 AM IST

Updated : Nov 15, 2022, 10:41 AM IST

ಕರ್ನಾಟಕದ ಜನರು ಗೋವಾದಲ್ಲಿ, ಗೋವಾ ನಿವಾಸಿಗಳು ಕರ್ನಾಟಕದಲ್ಲಿ ಸಹೋದರರಂತೆ ಇದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್​ ಸಾವಂತ್ ಹೇಳಿದರು.

Goa Chief Minister Pramod Sawant
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ಬಾಗಲಕೋಟೆ: ಇನ್ನು ಆರು ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭಾರಿ ಬಹುಮತ ಗಳಿಸಿ ಮತ್ತೆ ಆಡಳಿತಕ್ಕೆ ಬರಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್​ ಭವಿಷ್ಯ ನುಡಿದರು. ಜಿಲ್ಲೆಯ ಹಿಪ್ಪರಗಿ ಗ್ರಾಮದಲ್ಲಿ ನಡೆದ ಸಂಗಮೇಶ್ವರ ಮಹಾರಾಜರ 91ನೇ ಪುಣ್ಯಸ್ಮರಣೆ ಹಾಗೂ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಇದೇ ವೇಳೆ ಕನ್ನಡಿಗರು ಗೋವಾದಲ್ಲಿ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದರು.

ಸಂಗಮೇಶ್ವರ ಮಹಾರಾಜರ ಪುಣ್ಯಸ್ಮರಣೆಯಲ್ಲಿ ಗೋವಾ ಸಿಎಂ

ಗೋವಾದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಯುತ್ತಿರುವ ಘಟನಾವಳಿಗೆ ಪ್ರತಿಕ್ರಿಯಿಸಿ, ಕರ್ನಾಟಕದ ಜನರು ಗೋವಾದಲ್ಲಿ, ಗೋವಾ ನಿವಾಸಿಗಳು ಕರ್ನಾಟಕದಲ್ಲಿ ಸಹೋದರರಂತೆ ಇದ್ದಾರೆ. ನಾವೆಲ್ಲ ಮೊದಲು ಭಾರತೀಯರು. ನಾನು ನಿನ್ನೆಯಷ್ಟೇ ಕನ್ನಡಿಗರ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದೆ. ಕನ್ನಡಿಗರು ಅಲ್ಲಿ ಸುರಕ್ಷಿತವಾಗಿದ್ದಾರೆ. ಯಾವುದೇ ತೊಂದರೆ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು.

ಹಿಪ್ಪರಗಿ ಮಠಕ್ಕೆ ಭೇಟಿ ವಿಚಾರವಾಗಿ ಮಾತನಾಡಿ, ಇಂಚಗೇರಿ ಮಠ ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾದೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ. ಗೋವಾ ವಿಮೋಚನಾ ಚಳವಳಿಯಲ್ಲಿ ಸ್ವಾಮೀಜಿಗಳ ಪಾತ್ರ ಮಹತ್ವದ್ದು. ಇಲ್ಲಿ ಬಂದು ಸ್ವಾಮೀಜಿಗಳ ದರ್ಶನ ಪಡೆದಿರುವುದು ನನಗೆ ಸಂತಸ ತಂದಿದೆ ಎಂದರು.

ಇದನ್ನೂ ಓದಿ:ಪ್ರಕೃತಿ ಚಿಕಿತ್ಸಾ ಪದ್ಧತಿ ವಿಶ್ವದಲ್ಲೇ ಶ್ರೇಷ್ಠ: ಗೋವಾ ಸಿಎಂ ಪ್ರಮೋದ್ ಸಾವಂತ್

Last Updated : Nov 15, 2022, 10:41 AM IST

ABOUT THE AUTHOR

...view details