ಕರ್ನಾಟಕ

karnataka

ETV Bharat / state

ಬಾಗಲಕೋಟೆಯಲ್ಲಿ ಮಳೆ ಅಬ್ಬರ: ಉಕ್ಕಿ ಹರಿಯುತ್ತಿರುವ ಹಳ್ಳಕೊಳ್ಳಗಳು, ಸಂಚಾರ ಬಂದ್​ - Bagalkot rain

ಬಾಗಲಕೋಟೆ ಜಿಲ್ಲೆ ಕೆಲ ದಿನಗಳಿಂದ ನಿರಂತರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಸಂಚಾರ ಬಂದ್ ಆಗಿದೆ.

Bagalkot
ಬಾಗಲಕೋಟೆಯಲ್ಲಿ ನಿರಂತರ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳಕೊಳ್ಳಗಳು

By

Published : Jul 10, 2021, 8:18 AM IST

ಬಾಗಲಕೋಟೆ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಪರಿಣಾಮ ರಸ್ತೆಗಳು ಬಂದ್ ಆಗಿ ಜನರ ಹಾಗೂ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ.

ಬಾಗಲಕೋಟೆಯಲ್ಲಿ ನಿರಂತರ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳಕೊಳ್ಳಗಳು

ಇಲಕಲ್ ತಾಲೂಕಿನಲ್ಲಿ ಹಳ್ಳಗಳು ಉಕ್ಕಿ ಹರಿಯುತ್ತಿರುವುದರಿಂದ ನಂದವಾಡಗಿ-ಕಂಬಳಿಹಾಳ ರಸ್ತೆ ಸಂಪೂರ್ಣ ಬಂದ್ ಆಗಿದೆ. ಹಲವಡೆ ಹೊಲ, ಗದ್ದೆಗಳಿಗೆ ನೀರು ನುಗ್ಗಿದ್ದು, ರೈತರು ಕಂಗಾಲಾಗಿದ್ದಾರೆ. ಬಾಗಲಕೋಟೆ, ಬಾದಾಮಿ, ಹುನಗುಂದ ತಾಲೂಕಿನಾದ್ಯಂತ ನಿರಂತರ ಮಳೆ ಸುರಿಯುತ್ತಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಬಾದಾಮಿ ಹಾಗೂ ಹುನಗುಂದ ತಾಲೂಕಿನ ಕೆಲ ಗ್ರಾಮಗಳ ಮನೆ ಹಾಗೂ ಅಂಗಡಿಗಳಿಗೂ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯವಸ್ತವಾಗಿದೆ.

ಇದನ್ನೂ ಓದಿ:ಪಕ್ಷ ವಹಿಸುವ ಜವಾಬ್ದಾರಿ ನಿರ್ವಹಿಸುವುದಷ್ಟೇ ನನ್ನ ಕೆಲಸ: ಸದಾನಂದಗೌಡ

ABOUT THE AUTHOR

...view details