ಕರ್ನಾಟಕ

karnataka

By

Published : Aug 7, 2020, 6:11 PM IST

ETV Bharat / state

ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಪ್ರವಾಹ ಭೀತಿಯಲ್ಲಿ ಬಾಗಲಕೋಟೆ ಜನತೆ

ಕೃಷ್ಣಾ, ಘಟಪ್ರಭಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಬಾಗಲಕೋಟೆಯ ಜನರಲ್ಲಿ ಪ್ರವಾಹ ಭೀತಿ ಎದುರಾಗಿದೆ.

ತುಂಬಿ ಹರಿಯುತ್ತಿದೆ  ಕೃಷ್ಣಾ, ಘಟಪ್ರಭಾ ನದಿ
ತುಂಬಿ ಹರಿಯುತ್ತಿದೆ ಕೃಷ್ಣಾ, ಘಟಪ್ರಭಾ ನದಿ

ಬಾಗಲಕೋಟೆ:ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೃಷ್ಣಾ, ಘಟಪ್ರಭಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಸದ್ಯ ಇಲ್ಲಿನ ಜನತೆಗೆ ಪ್ರವಾಹ ಭೀತಿ ಎದುರಾಗಿದೆ.

ಕೃಷ್ಣಾನದಿಯ ಒಳಹರಿವು ಹೆಚ್ಚಾಗುತ್ತಿರುವ ಪರಿಣಾಮ ಜಮಖಂಡಿ ತಾಲೂಕಿನ ತುಬಚಿ-ಝಂಜರವಾಡ ರಸ್ತೆ ಜಲಾವೃತಗೊಂಡಿದೆ. ಇದರಿಂದ ಎರಡು ಗ್ರಾಮಗಳ ಸಂಪರ್ಕ ಸ್ಥಗಿತಗೊಂಡಿದ್ದು, ಸ್ಥಳೀಯರ ಸಂಚಾರಕ್ಕೆ ಅಡಚಣೆಯುಂಟಾಗಿದೆ.

ತುಂಬಿ ಹರಿಯುತ್ತಿದೆ ಕೃಷ್ಣಾ, ಘಟಪ್ರಭಾ ನದಿ

ಜಮಖಂಡಿ ತಾಲೂಕಿನ ತಹಶೀಲ್ದಾರ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಪ್ರವಾಹ ಭೀತಿ ಉಂಟಾದ ಪ್ರದೇಶಕ್ಕೆ ಭೇಟಿ ನೀಡಿ, ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಜಮಖಂಡಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್​ನಿಂದ 1 ಲಕ್ಷ 47 ಸಾವಿರ ಕ್ಯೂಸೆಕ್​ ನೀರು ಒಳಹರಿವು ಇದ್ದು, ಅಷ್ಟೇ ಪ್ರಮಾಣದಲ್ಲಿ ನೀರು ಹೊರಗೆ ಬಿಡಲಾಗುತ್ತದೆ. ಇದರಿಂದ ಚಿಕ್ಕ ಪಡಸಲಗಿ ಬ್ಯಾರೇಜ್​ನಲ್ಲಿ ನೀರು ತುಂಬಿ ಹರಿಯುತ್ತಿದೆ. ಇದೇ ಪ್ರಮಾಣದಲ್ಲಿ ನೀರು ಹೆಚ್ಚಾದಲ್ಲಿ ಜಮಖಂಡಿ ತಾಲೂಕಿನ ಕೃಷ್ಣಾ ನದಿ ತೀರದ 30ಕ್ಕೂ ಹೆಚ್ಚು ಪ್ರದೇಶದಲ್ಲಿ ಪ್ರವಾಹ ಭೀತಿ ಉಂಟಾಗಲಿದೆ.ಜಿಲ್ಲಾಡಳಿತವು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ABOUT THE AUTHOR

...view details