ಬಾಗಲಕೋಟೆ : ಜಮಖಂಡಿಯನ್ನು ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ನಾನು ಪ್ರಾಮಾಣಿಕ ಶತ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು.
ನಗರದ ಓಲೇಮಠದಲ್ಲಿ ಶ್ರೀಮಠದ ಡಾ. ಚನ್ನಬಸವ ಮಹಾಸ್ವಾಮಿಗಳು ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು,ಜಮಖಂಡಿಯನ್ನು ಸ್ವಚ್ಛ, ಸುಂದರವಾಗಿಸಲು ನಗರಸಭೆ ಅಧ್ಯಕ್ಷರು, ಸರ್ವ ಸದಸ್ಯರ ಒಗ್ಗಟ್ಟಿನೊಂದಿಗೆ ಕಾರ್ಯ ನಿರ್ವಹಿಸಿ ಮಾದರಿ ನಗರವನ್ನಾಗಿಸುವ ಸಂಕಲ್ಪ ಮಾಡಲಾಗಿದೆ ಎಂದರು.