ಬಾಗಲಕೋಟೆ: ಒಂದು ತಿಂಗಳ ಹಿಂದೆಯೇ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡುವಂತೆ ಕೋರಿ ಮಹಾರಾಷ್ಟ್ರದ ಸಿಎಂಗೆ ರಾಜ್ಯ ನಾಯಕರು ಮನವಿ ಮಾಡಿದ್ದರು. ಆದ್ರೆ ಇಂದಿಗೂ ಒಂದು ತೊಟ್ಟು ನೀರು ಬಾರದೇ ಇರುವುದು ದುರದೃಷ್ಟಕರ ಸಂಗತಿ.
ಕಳೆದ ತಿಂಗಳು ರಾಜ್ಯದಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಉಭಯ ಪಕ್ಷಗಳ ಮುಖಂಡರು ಮಹಾರಾಷ್ಟ್ರದ ಸಿಎಂ ಭೇಟಿ ಮಾಡಿ ಅವರಿಂದ ನೀರು ಬಿಡುಗಡೆಗೊಳಿಸುವ ಭರವಸೆಯೊಂದಿಗೆ ರಾಜ್ಯಕ್ಕೆ ಹಿಂದಿರುಗಿದ್ದರು. ಇದೀಗ ರಾಜ್ಯ ನಾಯಕರು ನೀಡಿದ್ದ ಹುಸಿ ಭರವಸೆಗೆ ಜನರು ಹಿಡಿ ಶಾಪ ಹಾಕುತ್ತಿದ್ದಾರೆ. ಮತ್ತು ನೀರು ಬರುವ ಯಾವುದೇ ನಿರೀಕ್ಷೆಯನ್ನು ಜನತೆ ಇಟ್ಟುಕೊಂಡಿಲ್ಲ.