ಬಾಗಲಕೋಟೆ: ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಬಾದಾಮಿ ತಾಲೂಕಿನ ಬಂಕನೇರಿ ಗ್ರಾಮದಲ್ಲಿ ನಡೆದಿದೆ. ನಾಗರಾಜ (22) ಮೃತಪಟ್ಟವರು. ಶೇಂಗಾ ಬೆಳೆಯ ಬಣವೆಗೆ ತಾಡಪಲ್ ಹೊದಿಸುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.
ಬಾಗಲಕೋಟೆ-ವಿಜಯಪುರದಲ್ಲಿ ಜೋರು ಮಳೆ: ಸಿಡಿಲು ಬಡಿದು ಯುವಕ, ಎತ್ತುಗಳು ಬಲಿ
ವಿಜಯಪುರ ಜಿಲ್ಲೆಯಲ್ಲಿ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ. ಗಾಳಿ ಮಳೆಗೆ ಮನೆ ಛಾವಣಿ ಹಾರಿ ಹೋಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ.
ಸಿಡಿಲು ತಾಗಿ ಬೆಂಕಿ ಹೊತ್ತಿರುವುದು
ವಿಜಯಪುರ ಜಿಲ್ಲೆಯಲ್ಲಿ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ. ಅಲ್ಲದೇ, ಗಾಳಿ ಮಳೆಗೆ ಮನೆ ಪತ್ರಾಸ್ಗಳು ಹಾರಿ ಹೋಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ವಿಜಯಪುರ ನಗರ, ಆಲಮಟ್ಟಿ, ತಾಳಿಕೋಟೆ ಸಿಂದಗಿ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಕಳೆದ ಒಂದು ವಾರದ ಹಿಂದೆ ಸಂಭವಿಸಿದ್ದ ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದಲ್ಲಿ ತೋಟಗಾರಿಕೆ ಹಾಗೂ ಕೃಷಿ ಬೆಳೆ ನೆಲಕಚ್ಚಿದ್ದವು.
ಇದನ್ನೂ ಓದಿ:ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ : ಮೂವರು ಮಹಿಳೆಯರು ಸಾವು, ಮಗು ಗಂಭೀರ