ಬಾಗಲಕೋಟೆ : ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ನಾನು ನಾಪತ್ತೆ ಆಗಿದ್ದೇನೋ, ಬಿಟ್ಟಿದ್ದೇನೋ ಎಂಬುದು ವಿಧಾನ ಪರಿಷತ್ ಚುನಾವಣೆ ನಂತರ ಗೊತ್ತಾಗುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ಕಾಂಗ್ರೆಸ್ಸಿನವರಿಗೆ ಸೋಲಿನ ಭಯ ಕಾಡುತ್ತಿದೆ. ಕಾಂಗ್ರೆಸ್ನವರಿಗೆ ಬಂಡಾಯದ ಭೀತಿ ಕಾಡುತ್ತಿದೆ. ಬಂಡಾಯದಿಂದ ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆ.
ಹೀಗಾಗಿ, ಇಂತಹ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಾನು ಸತೀಶ್ ಜಾರಕಿಹೊಳಿ ಅವರಿಗೆ ಹೇಳ ಬಯಸುತ್ತೇನೆ. ಕಾಂಗ್ರೆಸ್ ಸೋಲು ನಿಶ್ಚಿತ, ಬಿಜೆಪಿ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ ಎಂದರು.
ಸತೀಶ್ ಜಾರಕಿಹೊಳಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀಗೆ ಹೇಳಿದ್ದರು. ಬಹಳ ಮಾತನಾಡಿದ್ರು. ಆಗಲೂ ನನ್ನ ನೇತೃತ್ವದಲ್ಲಿಯೇ ಗೆಲುವಾಗಿತ್ತು. ನಮ್ಮ ಪಕ್ಷದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ನಮ್ಮ ಪಕ್ಷದ ತತ್ವ ಸಿದ್ಧಾಂತದ ಮೇಲೆ ಆಯ್ಕೆಯಾದವರು.