ಬಾಗಲಕೋಟೆ:ಪತಿಯ ಕಿರುಕುಳ ತಾಳಲಾರದೆ ಪತ್ನಿಯು ತನ್ನ ಮೂವರು ಮಕ್ಕಳಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಳು. ತಕ್ಷಣವೇ ಅವರನ್ನು ವಿಜಯಪುರದ ಸಕಾ೯ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಘಟನೆಯಲ್ಲಿ ತಾಯಿ ಸಾವನ್ನಪ್ಪಿದ್ದರೆ, ಇಬ್ಬರು ಮಕ್ಕಳು ಘಟನೆ ನಡೆದ 2 ದಿನಗಳ ಬಳಿಕ ಕೊನೆಯುಸಿರೆಳೆದಿದ್ದಾರೆ.
ಬಾಗಲಕೋಟೆ ಆತ್ಮಹತ್ಯೆ ಯತ್ನ ಪ್ರಕರಣ: ಅಮ್ಮ ಮೃತಪಟ್ಟ 2 ದಿನದ ಬಳಿಕ ಕಂದಮ್ಮಗಳು ಸಾವು - ಬಾಗಲಕೋಟೆ ಮಹಿಳೆ ಮಕ್ಕಳು ಆತ್ಮಹತ್ಯೆ
ಗಂಡನ ಕಿರುಕುಳಕ್ಕೆ ಬೇಸತ್ತ ಮಹಿಳೆಯು ತನ್ನ ಮೂವರು ಮಕ್ಕಳಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಳು. ಆಕೆ ಘಟನೆಯಲ್ಲಿ ಸಾವನ್ನಪ್ಪಿದ್ದರೆ, ಇಬ್ಬರು ಮಕ್ಕಳು ಘಟನೆ ನಡೆದ 2 ದಿನಗಳ ಬಳಿಕ ಕೊನೆಯುಸಿರೆಳೆದಿದ್ದಾರೆ.
![ಬಾಗಲಕೋಟೆ ಆತ್ಮಹತ್ಯೆ ಯತ್ನ ಪ್ರಕರಣ: ಅಮ್ಮ ಮೃತಪಟ್ಟ 2 ದಿನದ ಬಳಿಕ ಕಂದಮ್ಮಗಳು ಸಾವು suicide](https://etvbharatimages.akamaized.net/etvbharat/prod-images/768-512-12430242-thumbnail-3x2-mng.jpg)
ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮದ ನಿವಾಸಿ ಬಿಸ್ಮಿಲ್ಲಾ (28) ಎಂಬ ಮಹಿಳೆ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾಯಿ ಮೃತಪಟ್ಟಿದ್ದರೆ ಗಾಯಗೊಂಡ ಮಕ್ಕಳನ್ನು ವಿಜಯಪುರದ ಸಕಾ೯ರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಿನ್ನೆ ತಡರಾತ್ರಿ ಚಿಕಿತ್ಸೆ ಫಲಿಸದೆ ಯಾಸೀದಾ(6) & ಸನಾ (4) ಎಂಬ ಇಬ್ಬರು ಹೆಣ್ಣುಮಕ್ಕಳು ಮೃತಪಟ್ಟಿದ್ದಾರೆ.
ಮೂರನೇಯ ಮಗ ಸಮೀರ್ ಸಹ ಗಾಯಗೊಂಡು ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸಂತಾನಹರಣ ಶಸ್ತ್ರ ಚಿಕಿತ್ಸೆ ವಿಚಾರದಲ್ಲಿ ಪತಿ-ಪತ್ನಿಯ ಮಧ್ಯೆ ಪ್ರತಿನಿತ್ಯ ಗಲಾಟೆ ನಡೆಯುತ್ತಿತ್ತು ಎನ್ನಲಾಗ್ತಿದೆ. ಪತ್ನಿಗೆ ಕಿರುಕುಳ ನೀಡಿರುವ ದಸ್ತಗೀರಸಾಬನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಜಮಖಂಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.