ಬಾಗಲಕೋಟೆ: ಉಪ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರು ಬಿಜೆಪಿ ಪಕ್ಷದಲ್ಲಿ ಪ್ರಬಲ ಮುಖಂಡರು. ಮುಧೋಳ ಮೀಸಲು ಮತ ಕ್ಷೇತ್ರದಲ್ಲಿ ನಾಲ್ಕು ಬಾರಿ ಆಯ್ಕೆ ಆಗಿದ್ದರೂ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದ ಅಭಿವೃದ್ಧಿ ಕಂಡು ಬಂದಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ಮತಕ್ಷೇತ್ರದಲ್ಲಿ ಸರಿಯಾಗಿ ಅಭಿವೃದ್ಧಿ ಆಗದ ಹಿನ್ನೆಲೆ ಜನರಲ್ಲಿ ನಿರಾಶೆ ಮೂಡಿತ್ತು. ಈಗ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ ಹಿನ್ನೆಲೆ ಜನರಲ್ಲಿ ಸಂತಸ ಮೂಡಿದೆ. ನಾಲ್ಕು ಬಾರಿ ಶಾಸಕರಾದ ಗೋವಿಂದ ಕಾರಜೋಳರ ಅದೃಷ್ಟದ ಬಾಗಿಲು ತೆರೆದಿದೆ. ಉಪ ಮುಖ್ಯಮಂತ್ರಿ ಸ್ಥಾನದ ಜೊತೆಗೆ ಲೋಕೋಪಯೋಗಿ ಇಲಾಖೆ ಖಾತೆ ಸಿಕ್ಕಿದೆ. ಇದರಿಂದ ಮುಧೋಳ ಪಟ್ಟಣದಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಸುಧಾರಣೆ, ಕುಡಿಯುವ ನೀರು, ಒಳ ಚರಂಡಿ ವ್ಯವಸ್ಥೆ ಸೇರಿ ಇತರ ಸೌಲಭ್ಯಗಳು ದೂರಕಲಿವೆ ಎಂದು ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಡಾ.ಸಂಜಯ ಗಾರಗೆ ತಿಳಿಸಿದ್ದಾರೆ.