ಬಾಗಲಕೋಟೆ: ಬಾದಾಮಿ ತಾಲೂಕಿನ ಕುಳಗೇರಿ ಗ್ರಾಮದಲ್ಲಿ ಕ್ವಾರಂಟೈನ್ನಲ್ಲಿದ್ದವರಿಗೆ ಸೂಕ್ತ ವ್ಯವಸ್ಥೆ ಒದಗಿಸುತ್ತಿಲ್ಲ ಎಂದು ಜನತೆ ಆರೋಪಿಸಿದ್ದಾರೆ.
ಕ್ವಾರಂಟೈನ್ನಲ್ಲಿದ್ದವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುತ್ತಿಲ್ಲ ಎಂದು ಜನರಿಂದ ಆರೋಪ..
ಸೂಕ್ತ ಸ್ಥಳಾವಕಾಶ ಹಾಗೂ ಸೌಲಭ್ಯ ಇಲ್ಲದೆ ಹೂರಗಡೆ ಟೆಂಟ್ ಹಾಕಿ ಹೆಂಡತಿ, ಮಕ್ಕಳ ಜೊತೆಗೆ ವಾಸ ಮಾಡುತ್ತಿದ್ದಾರೆ. ಕುಡಿಯುವ ನೀರಿನ ವ್ಯವಸ್ಥೆ ಸೇರಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಆಹಾರದ ವ್ಯವಸ್ಥೆ ಸರಿಯಾಗಿ ನೀಡುತ್ತಿಲ್ಲ ಎಂದು ಆರೋಪಿಸಿದರು.
ಕುಳಗೇರಿ ಗ್ರಾಮದಲ್ಲಿ ಒಬ್ಬರಿಗೆ ಪಾಸಿಟಿವ್ ಕೇಸ್ ಬಂದ ಹಿನ್ನೆಲೆ ಅಕ್ಕಪಕ್ಕದವರಿಗೆ ಕ್ವಾರಂಟೈನ್ನಲ್ಲಿಡಲಾಗಿದೆ. ವಸತಿ ಶಾಲೆಯೊಂದರಲ್ಲಿ ಕ್ವಾರಂಟೈನ್ ಇಡಲಾಗಿದ್ದು, ಸೂಕ್ತ ಸ್ಥಳಾವಕಾಶ ಹಾಗೂ ಸೌಲಭ್ಯ ಇಲ್ಲದೆ ಹೂರಗಡೆ ಟೆಂಟ್ ಹಾಕಿ ಹೆಂಡತಿ, ಮಕ್ಕಳ ಜೊತೆಗೆ ವಾಸ ಮಾಡುತ್ತಿದ್ದಾರೆ. ಕುಡಿಯುವ ನೀರಿನ ವ್ಯವಸ್ಥೆ ಸೇರಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಆಹಾರದ ವ್ಯವಸ್ಥೆ ಸರಿಯಾಗಿ ನೀಡುತ್ತಿಲ್ಲ ಎಂದು ಆರೋಪಿಸಿದರು.
ಇನ್ನು, ತಾಲೂಕು ಆಡಳಿತವು ಜಾನುವಾರುಗಳಂತೆ ಒಂದೆಡೆ ಸೇರಿ, ಹಿಂಸೆ ನೀಡುವಂತಾಗಿದೆ. ಈ ಬಗ್ಗೆ ಸಂಬಂಧ ಪಟ್ಟ ಮೇಲಾಧಿಕಾರಿಗಳು ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.