ಕರ್ನಾಟಕ

karnataka

ETV Bharat / state

ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಬಾಗಲಕೋಟೆಯಲ್ಲಿ ಪ್ರತಿಭಟನೆ - Citizenship Amendment Act protest news

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಿಲ್ಲಾಡಳಿತ ಭವನದ ಎದುರು ವಿವಿಧ ಮುಸ್ಲಿಂ ಸಂಘಟನಾಕಾರರು ಬೃಹತ್ ಪ್ರತಿಭಟನೆ ನಡೆಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

By

Published : Dec 27, 2019, 8:01 AM IST

ಬಾಗಲಕೋಟೆ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಿಲ್ಲಾಡಳಿತ ಭವನದ ಎದುರು ವಿವಿಧ ಮುಸ್ಲಿಂ ಸಂಘಟನಾಕಾರರು ಬೃಹತ್ ಪ್ರತಿಭಟನೆ ನಡೆಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಸಿಎಎ ಹಾಗೂ ಎನ್​ಆರ್​ಸಿ ಕಾಯ್ದೆ ಕೇಂದ್ರ ಸರ್ಕಾರ ಜಾರಿಗೆ ತರಬಾರದು ಎಂದು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಮೊದಲು ಅಂಜುಮನ್ ಸಂಸ್ಥೆಯ ವತಿಯಿಂದ ಬೃಹತ್​ ಪ್ರತಿಭಟನಾ ಮೆರವಣಿಗೆಯನ್ನು ಜಿಲ್ಲಾಡಳಿತ ಭವನದವರೆಗೆ ನಡೆಸಲಾಯಿತು.

ನಂತರ ಜಿಲ್ಲಾಡಳಿತ ಭವನದಲ್ಲಿ ಪ್ರಮುಖ ಮುಖಂಡರು ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಆದಲ್ಲಿ ಮುಸ್ಲಿಂ ಸಮುದಾಯದವರಿಗೆ ಸಾಕಷ್ಟು ತೊಂದರೆ ಆಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂತಹ ಯೋಜನೆ ಜಾರಿಗೆ ತರಬಾರದು. ಇಡೀ ದೇಶಾದ್ಯಂತ ಮುಸ್ಲಿಂ ಜನಾಂಗದವರು ಇದನ್ನು ವಿರೋಧಿಸಿದ್ದಾರೆ. ಪ್ರಧಾನಿ ಮೋದಿ ಅವರು ಮುಸ್ಲಿಂ ಸಮುದಾಯದವರನ್ನು ಭಾರತದಿಂದ ಓಡಿಸುವ ಹುನ್ನಾರ ನಡೆಸಿದ್ದಾರೆ ಎಂದರು.

ABOUT THE AUTHOR

...view details