ಕರ್ನಾಟಕ

karnataka

By

Published : Jan 28, 2021, 1:36 PM IST

ETV Bharat / state

ಹೆಚ್ಚಿನ ಸಂಖ್ಯೆಯ ಬಸ್​ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಜಂಬಗಿ ಬಿ.ಕೆ.ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಸ್​ಗಳ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಟಯರ್​ಗೆ ಬೆಂಕಿ ಹಚ್ಚಿ ವಿದ್ಯಾರ್ಥಿಗಳು, ಪಾಲಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಹೆಚ್ಚಿನ ಸಂಖ್ಯೆಯ ಬಸ್​ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
Protest in Bagalkot to demanding increase of bus facility

ಬಾಗಲಕೋಟೆ:ಹೆಚ್ಚಿನ ಸಂಖ್ಯೆಯಲ್ಲಿ ಬಸ್​ಗಳ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಟಯರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಜಂಬಗಿ ಬಿ.ಕೆ.ಗ್ರಾಮದಲ್ಲಿ ನಡೆದಿದೆ.

ಈ ಮೊದಲು ಐದಾರು ಬಸ್​​ಗಳು ಸಂಚಾರ ಮಾಡುತ್ತಿದ್ದವು. ಇದೀಗ ಎರಡು ಬಸ್​​ಗಳು ಮಾತ್ರ ಸಂಚಾರ ಮಾಡುತ್ತಿವೆ. ಇದರಿಂದ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು, ಜಮಖಂಡಿಗೆ ತೆರಳುವುದಕ್ಕೆ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು, ಪಾಲಕರು ರಸ್ತೆ ತಡೆದು ಟಯರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಅಧಿಕಾರಿಗಳ ಗಮನಕ್ಕೂ ತಂದರೂ ಪ್ರಯೋಜನವಾಗಿಲ್ಲ. ಇಂತಹ ಸಮಸ್ಯೆ ಬಗ್ಗೆ ಜಮಖಂಡಿ ಘಟಕದ ವ್ಯವಸ್ಥಾಪಕ ಸಂಗಮೇಶ ಮಠೋಳಿ ಅವರ ಗಮನಕಿದ್ದರೂ ಸಮರ್ಪಕ ಬಸ್​​ಗಳ ಸಂಚಾರಕ್ಕೆ ಕ್ರಮಕೈಗೊಳ್ಳಲು ವಿಫಲರಾಗಿದ್ದಾರೆ. ಕೂಡಲೇ ಹೆಚ್ಚಿನ ಸಂಖ್ಯೆಯ ಬಸ್​ಗಳ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದರು.

ಸಂಬಂಧಪಟ್ಟ ಅಧಿಕಾರಿಗಳು ದೂರವಾಣಿ ಮೂಲಕ ಭರವಸೆ ನೀಡಿದ ಬಳಿಕ ಪ್ರತಿಭಟನೆಗೆ ಹಿಂಪಡೆಯಲಾಯಿತು.

ABOUT THE AUTHOR

...view details