ಕರ್ನಾಟಕ

karnataka

By

Published : Apr 20, 2023, 11:10 AM IST

ETV Bharat / state

ಕರ್ನಾಟಕದ ಜನ ಈ ಬಾರಿ ಆಪ್​ ಪಕ್ಷಕ್ಕೆ ಆಶೀರ್ವದಿಸಲಿದ್ದಾರೆ; ಪಂಜಾಬ್​ ಸಿಎಂ ಭಗವಂತ ಮಾನ್

ತೆರೆದಾಳ ವಿಧಾನಸಭಾ ಕ್ಷೇತ್ರದ ಆಮ್​ ಆದ್ಮಿ ಪಕ್ಷದ ಟಿಕೆಟ್​ ಘೋಷಿತ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ವೇಳೆ ಸಿಎಂ ಭಗವಂತ್​ ಮಾನ್ ಭಾಗಿಯಾಗಿದ್ದರು. ​

ಆಪ್​ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ಆಪ್​ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಬಾಗಲಕೋಟೆ:ಕಳೆದ ಮೂರು ದಿನಗಳಿಂದ ರಾಜ್ಯ ಪ್ರವಾಸದಲ್ಲಿದ್ದೇನೆ. ಉತ್ತರ ಕರ್ನಾಟಕದಲ್ಲಂತೂ ಎಲ್ಲೆಡೆ ಆಮ್ ಆದ್ಮಿ ಪಕ್ಷಕ್ಕೆ ಮಹತ್ವ ದೊರಕುತ್ತಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಜನತೆ ಆಪ್ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿಯ ರಬಕವಿ-ಬನಹಟ್ಟಿ ತಹಶೀಲ್ದಾರ್​ ಕಚೇರಿಯಲ್ಲಿ ತೇರದಾಳ ಕ್ಷೇತ್ರದ ಆಪ್‌ ಅಭ್ಯರ್ಥಿ ಅರ್ಜುನ ಹಲಗಿಗೌಡರ ಪರ ನಾಮಪತ್ರ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಪಂಜಾಬ್ ರಾಜ್ಯದಲ್ಲಿಯೂ ಇದೇ ಪರಿಸ್ಥಿತಿಯಿತ್ತು. ಮತದಾರರು ಆಮ್ ಆದ್ಮಿ ಪಕ್ಷದ ಮೇಲಿನ ವಿಶ್ವಾಸ ಹಾಗೂ ದೆಹಲಿಯಲ್ಲಿ ನಮ್ಮ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳಿಗೆ ಆಶೀರ್ವದಿಸಿ ಸರ್ಕಾರ ಮಾಡುವುದರ ಜೊತೆಗೆ, ಸಾಮಾನ್ಯ ವ್ಯಕ್ತಿಯಾಗಿದ್ದ ನನ್ನನ್ನು ಪಂಜಾಬ್​ ಮುಖ್ಯಮಂತ್ರಿಯನ್ನಾಗಿಸಿದ್ದಾರೆ. ಇದೇ ಮಾದರಿ ಕರ್ನಾಟಕದಲ್ಲಿಯೂ ನಡೆಯಲಿದೆ ಎಂದರು.

ಮುಂದುವರೆದು ಮಾತನಾಡಿ, ಸರ್ಕಾರ ರೂಪಿಸಲು ಯಾವುದೇ ತಂತ್ರಗಾರಿಕೆ ಬೇಕಿಲ್ಲ. ಪ್ರಾಮಾಣಿಕ ಹಾಗೂ ಜನತೆಗೆ ಉದ್ಯೋಗ ಸೃಷ್ಟಿಸುವುದರೊಂದಿಗೆ ರೈತರಿಗೆ ಒಳಿತಾಗುವ ಕಾರ್ಯದಲ್ಲಿ ತೊಡಗುವಲ್ಲಿ ಆಪ್ ನಿಸ್ಸೀಮವಿದೆ. ಇದೊಂದು ವಿಶ್ವಾಸದಿಂದ ಸರ್ಕಾರ ನಿಶ್ಚಿತವಾಗಿದ್ದು, ಎಲ್ಲೆಡೆ ಅಭ್ಯರ್ಥಿಗಳು ಭರದಿಂದ ಪ್ರಚಾರದಲ್ಲಿ ತೊಡಗಿದ್ದು, ಹೊಸ ಪ್ರಯೋಗದಲ್ಲಿ ವಿನೂತನ ಸಾಧನೆ ಆಪ್ ಮಾಡಲಿದೆ ಎಂದರು.

ಇದೇ ಸಮಯದಲ್ಲಿ ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಆಪ್‌ನಿಂದ ಮುಖ್ಯಮಂತ್ರಿಯಾಗಿ ಯಾರನ್ನೂ ಚುನಾವಣಾ ಮುನ್ನ ಘೋಷಿಸಿಲ್ಲ. ಬದಲಾಗಿ ಬಡವರ ಪಕ್ಷವಾಗಿರುವ ಇಲ್ಲಿ ಅತ್ಯಂತ ಸಾಮಾನ್ಯ ಹಾಗೂ ಕಟ್ಟಕಡೆಯ ವ್ಯಕ್ತಿಗೆ ಮುಖ್ಯಮಂತ್ರಿಯಾಗುವ ಹಕ್ಕು ಇಲ್ಲಿ ಮಾತ್ರ ಇದೆ ಎಂದು ಹೇಳಿದರು.

ರಾಘವ್ ಚಡ್ಡಾ ಚುನಾವಣೆ ಪ್ರಚಾರ: ಬುಧವಾರ ಬೆಂಗಳೂರಿನ ಪುಲಕೇಶಿನಗರ ಆಪ್ ಅಭ್ಯರ್ಥಿಪರ ​ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಕೂಡ ಬಿರುಸಿನ ಪ್ರಚಾರ ನಡೆಸಿದ್ದಾರೆ. ಪುಲಕೇಶಿನಗರ​ ಅಭ್ಯರ್ಥಿ ಸುರೇಶ್ ರಾಥೋಡ್ ಅವರನ್ನು ಬೆಂಬಲಿಸಿ ರಾಘವ್​ ಚಡ್ಡಾ ಮತ ಯಾಚಿಸಿದರು. ಪ್ರಚಾರಕ್ಕೂ ಮುನ್ನ ಚಡ್ಡಾ ಚೆಂಡೆವಾದ್ಯ ಬಾರಿಸುವ ಮೂಲಕ ಪ್ರಚಾರ ಆರಂಭಿಸಿದರು. ಈ ವೇಳೆ ಆಪ್​ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಪ್ರಚಾರದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ:ಚೆಂಡೆವಾದ್ಯ ಬಾರಿಸಿ ಅಭ್ಯರ್ಥಿ ಪರ ಮತಯಾಚಿಸಿದ ರಾಘವ್ ಚಡ್ಡಾ

ABOUT THE AUTHOR

...view details