ಕರ್ನಾಟಕ

karnataka

ETV Bharat / state

ದೇಶಕ್ಕೆ ಮಾದರಿಯಾಗುವ ಮರಳು ನೀತಿ ಶೀಘ್ರದಲ್ಲೇ ಜಾರಿ: ಸಚಿವ ನಿರಾಣಿ - sand policy soon be implemented

ಬೇರೆ ಬೇರೆ ರಾಜ್ಯಗಳು ಮರಳು ನೀತಿಯಲ್ಲಿ ಕರ್ನಾಟಕದ ಮಾದರಿಯನ್ನು ಅನುಸರಿಸಬೇಕು. ಅದಕ್ಕಾಗಿ ಈಗಾಗಲೇ ಅಧಿಕಾರಿಗಳು ಕಾರ್ಯೋನ್ಮಖರಾಗಿದ್ದಾರೆ. ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಪ್ರತಿಯೊಬ್ಬರಿಗೂ ಸುಲಭವಾಗಿ ಹಾಗೂ ಸರಳವಾಗಿ ಮರಳು ಸಿಗುವಂತೆ ಮಾಡುವ ಉದ್ದೇಶದಿಂದ ಶೀಘ್ರದಲ್ಲೇ ಹೊಸ ಮರಳು ನೀತಿಯನ್ನು ಜಾರಿಗೆ ತರಲಾಗುವುದು ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಸಚಿವ ನಿರಾಣಿ
ಸಚಿವ ನಿರಾಣಿ

By

Published : Feb 16, 2021, 10:42 PM IST

ಬಾಗಲಕೋಟೆ:ಪ್ರತಿಯೊಬ್ಬರಿಗೂ ಕಡಿಮೆ ದರದಲ್ಲಿ ಕೈಗೆಟುಕುವ ರೀತಿ ಮರಳು ಸಿಗುವಂತಹ ಹಾಗೂ ದೇಶಕ್ಕೆ ಮಾದರಿಯಾದ ಮರಳು ನೀತಿಯನ್ನು ಶೀಘ್ರದಲ್ಲೇ ಜಾರಿ ಮಾಡಲಾಗುವುದೆಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ನಗರದ ಹೊಸ ಪ್ರವಾಸ ಮಂದಿರದಲ್ಲಿ ಮಂಗಳವಾರ ಜರುಗಿದ ಮರಳು ಹಾಗೂ ಜಲ್ಲಿ ಕ್ರಷರ್ ಮಾಲೀಕರ ಹಾಗೂ ಅಧಿಕಾರಿಗಳ ಜೊತೆ ನಡೆದ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 2021-26ಕ್ಕೆ ಅನ್ವಯವಾಗುವಂತೆ ಮಾದರಿಯಾಗುವ ನಿಟ್ಟಿನಲ್ಲಿ ಮರಳು ನೀತಿಯನ್ನು ತರಲಾಗುತ್ತಿದೆ ಎಂದು ತಿಳಿಸಿದರು.

ಸಚಿವ ಮುರುಗೇಶ್ ನಿರಾಣಿ

ಬೇರೆ ಬೇರೆ ರಾಜ್ಯಗಳು ಮರಳು ನೀತಿಯಲ್ಲಿ ಕರ್ನಾಟಕದ ಮಾದರಿಯನ್ನು ಅನುಸರಿಸಬೇಕು. ಅದಕ್ಕಾಗಿ ಈಗಾಗಲೇ ಅಧಿಕಾರಿಗಳು ಕಾರ್ಯೋನ್ಮಖರಾಗಿದ್ದಾರೆ. ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಪ್ರತಿಯೊಬ್ಬರಿಗೂ ಸುಲಭವಾಗಿ ಹಾಗೂ ಸರಳವಾಗಿ ಮರಳು ಸಿಗುವಂತೆ ಮಾಡುವ ಉದ್ದೇಶದಿಂದ ಶೀಘ್ರದಲ್ಲೇ ಹೊಸ ಮರಳು ನೀತಿಯನ್ನು ಜಾರಿಗೆ ತರಲಾಗುವುದು ಎಂದರು.

ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ, ಮಧ್ಯ ಕರ್ನಾಟಕ ಸೇರಿದಂತೆ ಒಂದೊಂದು ಭಾಗಕ್ಕೆ ಪ್ರತ್ಯೇಕವಾದ ಮರಳು ನೀತಿ ಇದೆ. ಈಗಾಗಲೇ ಒಂದು ಕರಡನ್ನು ತಂದಿದ್ದೇವೆ. ಇದನ್ನೆಲ್ಲವನ್ನೂ ಬಗೆಹರಿಸುವ ಬಗ್ಗೆ ಈ ನೀತಿ ತರಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಆಶ್ರಯ ಮನೆಗಳಿಗೂ ಸಿಗುತ್ತಿರಲಿಲ್ಲ. ಇಲ್ಲಿಯವರೆಗೆ ಎಲ್ಲದಕ್ಕೂ ಕಡಿವಾಣವಿತ್ತು. ಇದನ್ನು ತಪ್ಪಿಸುವ ಉದ್ದೇಶದಿಂದ ಎತ್ತಿನಗಾಡಿ, ಟ್ರ್ಯಾಕ್ಟರ್​ಗಳಲ್ಲಿ ತರಲು ಅವಕಾಶ ನೀಡಲಾಗುವುದೆಂದು ತಿಳಿಸಿದರು.

ಮರಳು ಗಣಿಗಾರಿಕೆಗೆ ಬ್ಲಾಕ್‍ಗಳನ್ನು ಗುರುತಿಸಿ ಹರಾಜಿನ ಮೂಲಕ ಗುತ್ತಿಗೆ ನೀಡಿರುವ ಪ್ರದೇಶ ಹೊರತುಪಡಿಸಿ ಹಳ್ಳ, ತೊರೆಗಳಲ್ಲಿ ಸ್ವಂತ ಬಳಕೆಗೆ ದ್ವಿಚಕ್ರ ವಾಹನ, ಕತ್ತೆ ಬಂಡಿ, ಟ್ರ್ಯಾಕ್ಟರ್​ಗಳಲ್ಲಿ ಕೊಂಡೊಯ್ಯುವ ಬಡವರು, ರೈತರಿಗೆ ಪರವಾನಗಿ, ರಾಯಲ್ಟಿಯಿಂದ ವಿನಾಯಿತಿ ನೀಡಲಾಗುವುದು. ಆದರೆ, ಇದನ್ನೇ ಸಂಗ್ರಹಿಸಿ ಲಾರಿ, ಟಿಪ್ಪರ್​ಗಳಲ್ಲಿ ಬೇರೆಡೆ ಸಾಗಣೆ, ಮಾರಾಟ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಎಲ್ಲರಿಗೂ ಮರಳು ಸಿಗಬೇಕು. ನೈಸರ್ಗಿಕವಾಗಿಯೂ ಅಪಾಯ ಆಗಬಾರದು. ಸರ್ಕಾರದ ಬೊಕ್ಕಸಕ್ಕೆ ಆದಾಯ ಬರಬೇಕು. ಸಾರ್ವಜನಿಕರಿಗೂ ತೊಂದರೆಯಾಗಬಾರದು. ಇದು ನಮ್ಮ ಇಲಾಖೆಯ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.

ಯಾವುದೇ ಕಾರಣಕ್ಕೂ ಇಲಾಖೆಯಲ್ಲಿ ಭ್ರಷ್ಟಾಚಾರ ಸಹಿಸುವುದಿಲ್ಲ. ಯಾರಾದರೂ ಸಾರ್ವಜನಿಕರಿಗೆ ಅನಗತ್ಯವಾಗಿ ತೊಂದರೆ ಕೊಡುತ್ತಿರುವುದು ನನ್ನ ಗಮನಕ್ಕೆ ಬಂದರೆ, ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಭ್ರಷ್ಟಾಚಾರದ ಆರೋಪ ಇಬ್ಬರು ಅಧಿಕಾರಿಗಳ ಅಮಾನತು

ಭ್ರಷ್ಟಾಚಾರದ ಆರೋಪ, ಕಾನೂನುಬಾಹಿರ ಚಟುವಟಿಕೆಗಳಿಗೆ ಕುಮ್ಮಕ್ಕು ಮತ್ತು ಸಾರ್ವಜನಿಕರಿಗೆ ಅನಗತ್ಯವಾಗಿ ಕಿರುಕುಳ ಕೊಡುತ್ತಿದ್ದ ಆರೋಪದ ಮೇಲೆ ಚಿತ್ರದುರ್ಗ ಜಿಲ್ಲೆಯ ಭೂಗರ್ಭ ಶಾಸ್ತ್ರಜ್ಞ ಫಯಾಜ್ ಮತ್ತು ಲಿಂಗರಾಜು ಎಂಬುವರನ್ನು ಸೇವೆಯಿಂದ ಅಮಾನತು ಪಡಿಸಲಾಗಿದೆ ಎಂದರು.

ಈ ಇಬ್ಬರ ಮೇಲೆ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ ಸೇವೆಯಿಂದ ಅಮಾನತು ಮಾಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದರು.

ABOUT THE AUTHOR

...view details