ಬಾಗಲಕೋಟೆ: ಕಾರ್ಮಿಕರಿಗೆ ಕಿಟ್ ವಿತರಣೆ ಸಮಾರಂಭ ಮುಗಿಸಿದ ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಬಾದಾಮಿಯಿಂದ ನಿರ್ಗಮಿಸೋ ವೇಳೆ ಮಹಿಳೆಯರು ಮುತ್ತಿಗೆ ಹಾಕಿದ ಘಟನೆ ನಡೆಯಿತು.
ಹೊಸೂರು ಗ್ರಾಮದಲ್ಲಿ ಆರಂಭವಾಗಿರುವ ಮದ್ಯದಂಗಡಿ ಬಂದ್ ಮಾಡುವಂತೆ ಮಹಿಳೆಯರು ಒತ್ತಾಯಿಸಿ ಸಿದ್ದರಾಮಯ್ಯನವರ ಮುತ್ತಿಗೆ ಹಾಕಿದರು. ಕಳೆದ ಹಲವು ದಿನಗಳಿಂದ ಹೊಸೂರ ಗ್ರಾಮದಲ್ಲಿ ಸಾರಾಯಿ ಅಂಗಡಿ ತೆರವುಗೊಳಿಸಬೇಕು ಎಂದು ಮಹಿಳೆಯರು, ಜಿಲ್ಲಾಡಳಿತ ಭವನದಲ್ಲಿ ಸೇರಿದಂತೆ ಗ್ರಾಮದಲ್ಲಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದರು.