ಕರ್ನಾಟಕ

karnataka

By

Published : Nov 6, 2019, 10:22 AM IST

ETV Bharat / state

ಬಾಗಲಕೋಟೆಯಲ್ಲಿ ಆಟೋಗೆ ಅಪರಿಚಿತ ವಾಹನ ಡಿಕ್ಕಿ: ಮೂವರ ದುರ್ಮರಣ

ನಿನ್ನೆ ರಾತ್ರಿ ಅಪರಿಚಿತ ವಾಹನವೊಂದು ಟಂಟಂ ಆಟೋಗೆ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಮೃತಪಟ್ಟಿದ್ದಾರೆ.

ಅಪಘಾತವಾದ ಸ್ಥಳ

ಬಾಗಲಕೋಟೆ: ಜಿಲ್ಲೆಯ ಕಮತಗಿ ಗ್ರಾಮದ ಬಳಿ ಅಪರಿಚಿತ ವಾಹನವೊಂದು ಟಂಟಂ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಕಳೆದ ರಾತ್ರಿ ಜರುಗಿದೆ.

ಕಮತಗಿ ಗ್ರಾಮದ ಹೂರ ವಲಯದ ನೇಕಾರ ಕಾಲೋನಿ‌ ಬಳಿ ಈ ದುರ್ಘಟನೆ ಜರುಗಿದ್ದು, ಸ್ಥಳದಲ್ಲಿ ಟಂಟಂ ಆಟೋ ಚಾಲಕ ಹಾಗೂ ಇನ್ನೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮತ್ತೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಸಂಗಮೇಶ ಬಸವರಾಜ್ ಕಿತ್ತಲಿ(25), ಬಸು ಚಿನ್ನಪ್ಪ ತೋರಗಲ್ಲ (26) ಸ್ಥಳದಲ್ಲಿಯೇ ಮೃತಪಟ್ಟರೆ, ವಿಠ್ಠಲ ವಗ್ಗಾ (23) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ‌ಪಟ್ಟಿದ್ದಾರೆ ಎನ್ನಲಾಗಿದೆ. ಈ ಮೂವರು ಗುಳೇದಗುಡ್ಡ ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದ್ದು, ಕಮತಗಿಯಿಂದ ಗುಳೇದಗುಡ್ಡಕ್ಕೆ ಹೋಗುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಅಮೀನಗಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details