ಕರ್ನಾಟಕ

karnataka

By

Published : Sep 29, 2019, 4:34 AM IST

ETV Bharat / state

ಸಾಲಕ್ಕೆ ಹೆದರಿ ನೇಣಿಗೆ ಕೊರಳೊಡ್ಡಿದ ಹಸು, ಕುರಿ ಸಾಕಾಣಿಕೆದಾರರ

ಹಸು- ಕುರಿ ಸಾಕಾಣಿಕೆ ಮಾಡುತ್ತಿದ್ದ ವ್ಯಕ್ತಿಯೋರ್ವರು ಸಾಲಬಾಧೆ ತಾಳಲಾರದೆ ತಮ್ಮ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಾಮೇನಹಳ್ಳಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

A man committed suicide

ದೊಡ್ಡಬಳ್ಳಾಪುರ:ತಾಲೂಕಿನ ಕಾಮೇನಹಳ್ಳಿ ಗ್ರಾಮದ ಹೊರ ವಲಯದಲ್ಲಿನ ತೋಟದ ಮನೆಯಲ್ಲಿ ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೃಷ್ಣಮೂರ್ತಿ (41) ನೇಣಿಗೆ ಕೊರಳೊಡ್ಡಿದ ವ್ಯಕ್ತಿ. ಬೆಂಗಳೂರಿನ ಬಾಣಸವಾಡಿ ನಿವಾಸಿಯಾಗಿದ್ದ ಕೃಷ್ಣಮೂರ್ತಿ, ಎರಡು ಎಕರೆ ಜಮೀನನ್ನು ಭೋಗ್ಯಕ್ಕೆ ಪಡೆದು ಹಸು ಮತ್ತು ಕುರಿ ಸಾಕಾಣಿಕೆ ಮಾಡುತ್ತಿದ್ದರು. ಹಸು- ಕುರಿ ಸಾಕಾಣಿಕೆಯಲ್ಲಿ ನಷ್ಟ ಅನುಭವಿಸಿದ್ದು, ಮಾಡಿದ ಸಾಲ ತಿರಿಸಲು ಆಗದೆ ಹೆದರಿ ನೇಣಿಗೆ ಕೊರಳ್ಳೊಡ್ಡಿದ್ದಾರೆ ಎಂದು ಮೃತರ ಸಂಬಂಧಿಕರು ಆಪಾದಿಸಿದ್ದಾರೆ.

ಘಟನೆಯ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details