ದೊಡ್ಡಬಳ್ಳಾಪುರ :ರಸ್ತೆ ಬದಿ ನಿಂತಿದ್ದ ತಾಯಿ ಹಾಗೂ ಮಗುನಿವ ಮೇಲೆ ಟ್ರ್ಯಾಕ್ಟರ್ವೊಂದು ಹರಿದ ಘಟನೆ ನಗರದ ಅರಳು ಮಲ್ಲಿಗೆ ಬಳಿ ನಡೆದಿದೆ. ಘಟನೆಯಲ್ಲಿ ತಾಯಿ ಉಮಾ (26) ಮೃತಪಟ್ಟರೆ, ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ.
ರಸ್ತೆ ಬದಿ ನಿಂತಿದ್ದ ತಾಯಿ ಹಾಗೂ ಮಗುನಿವ ಮೇಲೆ ಹರಿದ ಟ್ರ್ಯಾಕ್ಟರ್ ಮಗುವಿಗೆ ಮೂತ್ರ ವಿಸರ್ಜನೆ ಮಾಡಿಸಲು ರಸ್ತೆ ಬದಿ ನಿಂತಿದ್ದ ತಾಯಿ ಹಾಗೂ ಮಗುವಿನ ಮೇಲೆ ಏಕಾಏಕಿ ಟ್ರ್ಯಾಕ್ಟರ್ ನುಗ್ಗಿದ್ದರಿಂದ ಈ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಮೃತ ಮಹಿಳೆ ನಾಗಸಂದ್ರ ನಿವಾಸಿ ಎಂದು ತಿಳಿದು ಬಂದಿದೆ.
ರಸ್ತೆ ಬದಿ ನಿಂತಿದ್ದ ತಾಯಿ ಹಾಗೂ ಮಗುನಿವ ಮೇಲೆ ಹರಿದ ಟ್ರ್ಯಾಕ್ಟರ್ ಮಗುವಿನೊಂದಿಗೆ ಪತಿ ನಾಗೇಶ್ ಜೊತೆ ಬೈಕ್ನಲ್ಲಿ ಊರಿಗೆ ತೆರಳುತ್ತಿದ್ದಾಗ ದಾರಿ ಮಧ್ಯೆ ಮೂತ್ರ ವಿಸರ್ಜನೆಗಾಗಿ ನಿಂತಿದ್ದರು. ಈ ವೇಳೆ ರಸ್ತೆ ಬದಿ ಬೈಕ್ ನಿಲ್ಲಿಸಿದಾಗ ಟ್ರ್ಯಾಕ್ಟರ್ ಏಕಾಏಕಿ ಇವರ ಮೇಲೆಯೇ ನುಗ್ಗಿದೆ. ಘಟನೆಯಲ್ಲಿ ಉಮಾ ತೀವ್ರ ಗಾಯಗೊಂಡಿದ್ದರಿಂದ ಸ್ಥಳೀಯರ ಸಹಾಯದೊಂದಿಗೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ರಸ್ತೆ ಬದಿ ನಿಂತಿದ್ದ ತಾಯಿ ಹಾಗೂ ಮಗುನಿವ ಮೇಲೆ ಹರಿದ ಟ್ರ್ಯಾಕ್ಟರ್ ಅದೃಷ್ಟವಶಾತ್ ಮಗುವಿಗೆ ಯಾವುದೇ ತೊಂದರೆಯಾಗಿಲ್ಲ. ಇನ್ನು ವಾಹನದ ಬಳಿ ನಿಂತಿದ್ದ ನಾಗೇಶನಿಗೂ ಕೂಡ ಗಾಯಗಳಾಗಿವೆ. ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯದಿಂದಲೇ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.