ಬೆಂಗಳೂರು:ಈಗಾಗಲೇ ನಗರದಲ್ಲಿ ವಿದ್ಯುತ್ ಅವಘಡಗಳಿಂದಾಗಿ ಕೆಲವರ ಪ್ರಾಣ ಹಾರಿಹೋಗಿದ್ದರೆ, ಇನ್ನೂ ಕೆಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಲ್ಲೇನಹಳ್ಳಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆವೋರ್ವಳು ಸಾವನ್ನಪ್ಪಿದ್ದಾಳೆ.
ಸಾಕಮ್ಮ (55) ಮೃತ ಮಹಿಳೆ. ಇಂದು ಮಧ್ಯಾಹ್ನ ತಿಪ್ಪೆಗೆ ಕಸ ಹಾಕಲು ಹೋಗಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಾಕಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. 2 ದಿನಗಳ ಹಿಂದೆ ತಂತಿ ತುಂಡಾಗಿ ಬಿದ್ದಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಮಹಿಳೆಯ ಪ್ರಾಣ ಹೋಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.