ಕರ್ನಾಟಕ

karnataka

By

Published : Sep 27, 2019, 9:19 PM IST

Updated : Sep 27, 2019, 9:33 PM IST

ETV Bharat / state

ಐಎಎಸ್ ಅಧಿಕಾರಿ ರೋಹಿಣಿ ವರ್ಗಾವಣೆಗೆ ವಿರೋಧ: ಪ್ರತಿಭಟನೆ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿರೋಧಿಸಿ ಶ್ರೀನೆಲದ ಆಂಜನೇಯ ಸ್ವಾಮಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಹಾಗೂ ಮೇಸ್ತ್ರಿಗಳ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ.

ಪ್ರತಿಭಟನೆ

ದೊಡ್ಡಬಳ್ಳಾಪುರ :ದೊಡ್ಡಬಳ್ಳಾಪುರನಗರದ ಶ್ರೀನೆಲದ ಆಂಜನೇಯ ಸ್ವಾಮಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಹಾಗೂ ಮೇಸ್ತ್ರಿಗಳ ಸಂಘದಿಂದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿರೋಧಿಸಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ನಡೆಸಿದ ಕಟ್ಟಡ ಕಾರ್ಮಿಕ ಸಂಘ

ರೋಹಿಣಿ ಸಿಂಧೂರಿಯವರು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ ಬಡ ಕಟ್ಟಡ ಕೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಸಂಗ್ರಹಿಸಲಾಗಿರುವ ಹಣವನ್ನು ರಕ್ಷಿಸಿ ಕಟ್ಟಡ ಕಾರ್ಮಿಕರ ಉದ್ದಾರಕ್ಕೆ ಬಳಸುವ ಯೋಜನೆಗಳನ್ನು ಜಾರಿಗೆ ತಂದಿದ್ದರು.

ಆದರೆ, ರಾಜ್ಯ ಸರ್ಕಾರ ಕಾರ್ಮಿಕರ ಕಲ್ಯಾಣ ಮಂಡಳಿಯ ಹಣವನ್ನು ನೆರೆ ಪರಿಹಾರಕ್ಕೆ ಬಳಸುವ ಯತ್ನ ನಡೆಸಿದರು. ಇದಕ್ಕೆ ರೋಹಿಣಿ ಸಿಂಧೂರಿ ಅವಕಾಶ ನೀಡಿರಲಿಲ್ಲ. ಇದೇ ಕಾರಣಕ್ಕೆ ದಕ್ಷ ಅಧಿಕಾರಿ ವರ್ಗಾವಣೆ ಮಾಡಿರುವುದು ನಿಜಕ್ಕೂ ದುರದೃಷ್ಟಕರ ಹಾಗೂ ಕಟ್ಟಡ ಕಾರ್ಮಿಕರ ವಿರೋಧಿ ನೀತಿಯಾಗಿದೆ ಎಂದು ಕಟ್ಟಡ ಕಾರ್ಮಿಕರು ಪ್ರತಿಭಟನೆ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Last Updated : Sep 27, 2019, 9:33 PM IST

ABOUT THE AUTHOR

...view details