ಕರ್ನಾಟಕ

karnataka

ETV Bharat / state

ಮಹಿಳೆಗೆ ಡಿಕ್ಕಿ ಹೊಡೆದು, ಹಳ್ಳಕ್ಕೆ ಬಿದ್ದ ಖಾಸಗಿ ಬಸ್; 14 ಜನರು ಗಂಭೀರ - bus accident ನೆಡಸ

ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಬಸ್ ನಿಲ್ದಾಣದಲ್ಲಿ ಬಸ್​ಗಾಗಿ ಕಾಯುತ್ತಿದ್ದ ಮಹಿಳೆಗೆ ಬಸ್​ ಡಿಕ್ಕಿ ಹೊಡೆದು, ನಂತರ ಪಕ್ಕದಲ್ಲೇ ಇದ್ದ ಹಳ್ಳಕ್ಕೆ ಪಲ್ಟಿಯಾಗಿರುವ ಘಟನೆ ಕರ್ನಾಟಕ-ತಮಿಳುನಾಡು ಗಡಿ ಸೂಳಗಿರಿ ಸಮೀಪದ ಚಿನ್ನಾರಪಲ್ಲಿ ಘಟನೆ ನಡೆದಿದೆ.

ಮಹಿಳೆಗೆ ಡಿಕ್ಕಿ ಹೊಡೆದು, ಹಳ್ಳಕ್ಕೆ ಬಿದ್ದ ಖಾಸಗಿ ಬಸ್...14 ಜನರಿಗೆ ಗಂಭೀರ ಗಾಯ

By

Published : Sep 21, 2019, 6:33 PM IST

ಆನೇಕಲ್:ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಬಸ್ ನಿಲ್ದಾಣದಲ್ಲಿ ಬಸ್​ಗಾಗಿ ಕಾಯುತ್ತಿದ್ದ ಮಹಿಳೆಗೆ ಬಸ್​ ಡಿಕ್ಕಿ ಹೊಡೆದಿದೆ. ಬಳಿಕ ಬಸ್ ಪಕ್ಕದಲ್ಲೇ ಇದ್ದ ಹಳ್ಳಕ್ಕೆ ಪಲ್ಟಿಯಾಗಿರುವ ಘಟನೆ ಕರ್ನಾಟಕ-ತಮಿಳುನಾಡು ಗಡಿ ಸೂಳಗಿರಿ ಸಮೀಪ ನಡೆದಿದೆ.

ಮಹಿಳೆಗೆ ಡಿಕ್ಕಿ ಹೊಡೆದು, ಹಳ್ಳಕ್ಕೆ ಬಿದ್ದ ಖಾಸಗಿ ಬಸ್...14 ಜನರಿಗೆ ಗಂಭೀರ ಗಾಯ

ಘಟನೆಯಲ್ಲಿ ಬಸ್​ನಲ್ಲಿದ್ದ 14 ಜನ ಸೇರಿದಂತೆ ಬಸ್​ಗಾಗಿ ಕಾಯುತ್ತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೃಷ್ಣಗಿರಿಯಿಂದ ಬೆಂಗಳೂರು ಮಾರ್ಗವಾಗಿ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ, ಬಸ್ ಮಹಿಳೆಯಗೆ ಡಿಕ್ಕಿ ಹೊಡೆದು ನಂತರ ಪಕ್ಕದಲ್ಲಿದ್ದ ಹಳ್ಳಕ್ಕೆ ಬಿದ್ದಿದೆ.

ಗಾಯಗೊಂಡವರನ್ನು ಸ್ಥಳೀಯ ಖಾಸಗಿ‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತವಾದ ಬಸ್​ ಮಾಲೀಕನ ತಾಯಿಯು ಅದೇ ಬಸ್​ನಲ್ಲಿ ಪ್ರಯಾಣಿಸುತ್ತಿದ್ದು, ಅವರಿಗೂ ಗಂಭೀರ ಗಾಯವಾಗಿದೆ.

ಸೂಳಗಿರಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details