ಕರ್ನಾಟಕ

karnataka

ETV Bharat / state

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಬಿಎಸ್​ವೈ, ಎಂಟಿಬಿ ವಿರುದ್ಧ ಕಾಂಗ್ರೆಸ್​​ ದೂರು - ಸಿಎಂ ಬಿಎಸ್​.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ದೂರು

ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್​​ ಮುಖಂಡ ಹೇಮಂತ್​​ ಕುಮಾರ್ ಚುನಾವಣಾ ಅಧಿಕಾರಿಗಳಿಗೆ ದೂರು ಕೊಟ್ಟಿದ್ದಾರೆ.

ಬಿಎಸ್​ವೈ, ಎಂಟಿಬಿ ವಿರುದ್ಧ ಕಾಂಗ್ರೆಸ್ ದೂರು

By

Published : Nov 21, 2019, 12:38 PM IST

ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್​​ ಮುಖಂಡ ಹೇಮಂತ್ ಕುಮಾರ್ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ನ. 18ರಂದು ಎಂಟಿಬಿ ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾಧಿಕಾರಿ ಕಚೇರಿಯಿಂದ 60 ಮೀಟರ್ ದೂರದಲ್ಲೇ ಅನುಮತಿ ಪಡೆಯದೇ ಚುನಾವಣಾ ಪ್ರಚಾರ ನಡೆಸಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ಬಿಎಸ್​ವೈ ಅವರು ಎಂಟಿಬಿ ಗೆಲ್ಲಿಸಿದರೆ 24 ಗಂಟೆಯಲ್ಲಿ ಮಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬಿಎಸ್​ವೈ, ಎಂಟಿಬಿ ವಿರುದ್ಧ ದೂರು

ಹೊಸಕೋಟೆಗೆ ನೂರಾರು ಕೋಟಿ ಅನುದಾನ ಬಿಡುಗಡೆ ಮಾಡಿದ್ದೇನೆ ಎಂದು ಬಹಿರಂಗವಾಗಿ ಬಿಎಸ್​ವೈ ಅವರು ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ. ನೀತಿ ಸಂಹಿತೆ ಉಲ್ಲಂಘಿಸಿರುವ ಎಂಟಿಬಿ ಹಾಗೂ ಸಿಎಂ ವಿರುದ್ಧ ತುರ್ತಾಗಿ ದೂರು ದಾಖಲಿಸಿಕೊಳ್ಳುವಂತೆ ಒತ್ತಾಯಿಸಿದ್ದಾರೆ.

ABOUT THE AUTHOR

...view details