ಕರ್ನಾಟಕ

karnataka

By

Published : Sep 2, 2019, 2:34 AM IST

ETV Bharat / state

ಕೆರೆಗೆ ಕಲುಷಿತ ನೀರು ಬಿಡುಗಡೆ: ಲಕ್ಷಾಂತರ ಮೀನುಗಳ ಮಾರಣಹೋಮ

ಕೆರೆಗೆ ಬೆಂಗಳೂರಿನ ವರ್ತೂರು ಕೆರೆಯ ಕಲುಷಿತ ನೀರು ಹರಿದು ಬರುತ್ತಿದ್ದು, ಈ ಕಾರಣದಿಂದಲೇ ಲಕ್ಷಾಂತರ ಮೀನುಗಳ ಸಾವನ್ನಪ್ಪಿವೆ ಎನ್ನಲಾಗಿದೆ.

ಲಕ್ಷಾಂತರ ಮೀನುಗಳ ಮಾರಣಹೋಮ

ಆನೇಕಲ್: ಕೆರೆಯ ನೀರಿಗೆ ಕಲುಷಿತ ನೀರು ಸೇರಿದ ಪರಿಣಾಮ ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳು ಸಾವನ್ನಪ್ಪಿರುವಂತಹ ಘಟನೆ ಕರ್ನಾಟಕ- ತಮಿಳುನಾಡು ಗಡಿಯಲ್ಲಿರುವ ಮರಗೊಂಡಪಲ್ಲಿಯಲ್ಲಿ ನಡೆದಿದೆ.

ಲಕ್ಷಾಂತರ ಮೀನುಗಳ ಮಾರಣಹೋಮ

ಈ ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲು 3 ಲಕ್ಷಕ್ಕೂ ಹೆಚ್ಚು ಮೀನು ಮರಿಗಳನ್ನು ಬಿಡಲಾಗಿತ್ತು. ಕೆರೆಗೆ ಬೆಂಗಳೂರಿನ ವರ್ತೂರು ಕೆರೆಯ ಕಲುಷಿತ ನೀರು ಹರಿದು ಬರುತ್ತಿದ್ದು, ಈ ಕಾರಣದಿಂದಲೇ ಲಕ್ಷಾಂತರ ಮೀನುಗಳ ಸಾವನ್ನಪ್ಪಿವೆ ಎನ್ನಲಾಗಿದೆ.

ಮೀನುಗಳ ಸಾವಿನ ನಂತರ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details