ಕರ್ನಾಟಕ

karnataka

ಪಿಯು ಮೌಲ್ಯಮಾಪಕರಿಗೆ ಅನುದಾನ ಬಿಡುಗಡೆ ಮಾಡುವಂತೆ ಸಿಎಂಗೆ ದಿನೇಶ್​​ ಗುಂಡೂರಾವ್​​​ ಪತ್ರ

ಪಿಯು ಪರೀಕ್ಷೆಯಲ್ಲಿ ಮೌಲ್ಯಮಾಪನ ಮಾಡಿದ 16,000 ಉಪನ್ಯಾಸಕರಿಗೆ ಗೌರವ ಸಂಭಾವನೆಯನ್ನು ನೀಡದೆ ನಿರ್ಲಕ್ಷ್ಯ ವಹಿಸಿರುವ ಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‌

By

Published : May 28, 2019, 4:02 AM IST

Published : May 28, 2019, 4:02 AM IST

ETV Bharat / state

ಪಿಯು ಮೌಲ್ಯಮಾಪಕರಿಗೆ ಅನುದಾನ ಬಿಡುಗಡೆ ಮಾಡುವಂತೆ ಸಿಎಂಗೆ ದಿನೇಶ್​​ ಗುಂಡೂರಾವ್​​​ ಪತ್ರ

ದಿನೇಶ್​ ಗುಂಡುರಾವ್​, ಕುಮಾರಸ್ವಾಮಿ

ಬೆಂಗಳೂರು: ಪಿಯುಸಿ ಪರೀಕ್ಷೆಯಲ್ಲಿ ಮೌಲ್ಯಮಾಪನ ಮಾಡಿದ 16,000 ಉಪನ್ಯಾಸಕರಿಗೆ ಗೌರವ ಸಂಭಾವನೆಯನ್ನು ನೀಡದೆ ನಿರ್ಲಕ್ಷ್ಯ ವಹಿಸಿರುವ ಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‌

ಈ ಸಂಬಂಧ ‌ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಪತ್ರ ಬರೆದಿರುವ ದಿನೇಶ್ ಗುಂಡೂರಾವ್, ‌ಎಸ್ಎಸ್ಎಲ್​ಸಿ ಪರೀಕ್ಷೆ ಮೌಲ್ಯಮಾಪನ ಮಾಡಿದ ಶಿಕ್ಷಕರಿಗೆ ಈಗಾಗಲೇ ಗೌರವಧನ ಖಾತೆಗೆ ಜಮಾ ಆಗಿದೆ. ಆದರೆ ಪಿಯುಸಿ ಉಪನ್ಯಾಸಕರಿಗೆ ಮೌಲ್ಯಮಾಪನ ಆಗಿ 20 ದಿನ ಕಳೆದರು ಇನ್ನೂ ಹಣ ಪಾವತಿಸಿಲ್ಲ ಎಂದು ವಿವರಿಸಿದ್ದಾರೆ.

ತಕ್ಷಣ ಪಿಯುಸಿ ಬೋರ್ಡ್​ನ ಅಧಿಕಾರಿಗಳು ಹಣ ಪಾವತಿಸಲು ವ್ಯವಸ್ಥೆ ಮಾಡಬೇಕು. ಮುಖ್ಯಮಂತ್ರಿ ಅವರ ಬಳಿ‌ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕೂಡ ಇದ್ದು, ಈ ನಿಟ್ಟಿನಲ್ಲಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ABOUT THE AUTHOR

...view details