ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ) : ಬಿಜೆಪಿ ರಾಜ್ಯ ಸರ್ಕಾರದ ಜನಸ್ಪಂದನ ಕಾರ್ಯಕ್ರಮಕ್ಕೆ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ನಾಗರಿಕರು ಹೋರಾಟ ಮಾಡುತ್ತಿದ್ದಾರೆ.
ದೊಡ್ಡಬಳ್ಳಾಪುರ ನಗರದ ಎಪಿಎಂಪಿ ವರ್ತಕರು ಇಂದು ಕಪ್ಪು ಬಾವುಟ ಪ್ರದರ್ಶನ ಮಾಡುವ ಮೂಲಕ ಜನಸ್ಪಂದನ ಕಾರ್ಯಕ್ರಮಕ್ಕೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರವನ್ನಾಗಿ ದೊಡ್ಡಬಳ್ಳಾಪುರ ನಗರವನ್ನು ಘೋಷಣೆ ಮಾಡಬೇಕೆಂಬುದು ಹೋರಾಟಗಾರರ ಒತ್ತಾಯವಾಗಿದೆ. ಇಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮಕ್ಕೆ ಕಪ್ಪು ಬಾವುಟ ಪ್ರದರ್ಶನ ಮಾಡುವ ಎಚ್ಚರಿಕೆ ನೀಡಿದ ಹೋರಾಟಗಾರರು ಇಂದು ಬೆಳಗ್ಗೆ ಎಪಿಎಂಸಿ ಮಾರುಕಟ್ಟೆಯಲ್ಲಿ ಕಪ್ಪು ಬಾವುಟ ಮತ್ತು ಕಪ್ಪು ಬಟ್ಪೆಯನ್ನು ಪ್ರದರ್ಶನ ಮಾಡುವ ಮೂಲಕ ಎಚ್ಚರಿಕೆ ರವಾನಿಸಿದರು.