ನೆಲಮಂಗಲ: ಪಿತ್ರಾರ್ಜಿತ ಆಸ್ತಿಯನ್ನ ಕಳೆದುಕೊಂಡ ಒಂದೇ ಕುಟುಂಬದ 26 ಜನ ದಯಾಮರಣ ಕೋರಿ ಪತ್ರ ಬರೆದು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ತಡಸೀಘಟ್ಟ ಗ್ರಾಮದ ಗಂಗಹನುಮಕ್ಕ ಕುಟುಂಬದ 26 ಜನರು ದಯಾಮರಣ ಕೋರಿ ಪತ್ರ ಬರೆದಿದ್ದಾರೆ. 1981 ರಲ್ಲಿ ಗಂಗಹನುಮಕ್ಕನ ತಂದೆ ದಿ. ಭೈರಣ್ಣ ಮಗಳ ಮದುವೆಗೆ ಎಂದು ತಮ್ಮ 3 ಎಕರೆ 22 ಗುಂಟೆ ಜಮೀನನ್ನು ಅದೇ ಗ್ರಾಮದ ರಾಜಗೋಪಾಲಯ್ಯ ಎಂಬ ವ್ಯಕ್ತಿಗೆ 3,500 ರೂಗಳಿಗೆ ವಾಯಿದೆ ಕ್ರಯಕ್ಕೆ ಕೊಟ್ಟಿದ್ದರು.
ಆದರೇ ರಾಜಗೋಪಾಲಯ್ಯ ನಕಲಿ ಸಹಿ ಮತ್ತು ದಾಖಲೆಗಳನ್ನ ಸೃಷ್ಟಿಸಿ ವಾಯಿದೆ ಕ್ರಯಕ್ಕೆ ಕೊಟ್ಟಿದ್ದ ಜಮೀನನ್ನು 2012ರಲ್ಲಿ ಶುದ್ಧ ಕ್ರಯ ಮಾಡಿಕೊಂಡು ತನ್ನ ಹೆಸರಿಗೆ ಮಾಡಿಸಿಕೊಂಡು ತಮ್ಮ ಪಿತ್ರಾರ್ಜಿತ ಆಸ್ತಿಯನ್ನು ಕಬಳಿಸಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ.