ನೆಲಮಂಗಲ (ಬೆಂಗಳೂರು ಗ್ರಾಮಾಂತರ):ಕೊಟ್ಟಿಗೆಗೆ ಬೆಂಕಿ ತಗುಲಿದ್ದರಿಂದ ಹಸುವಿನ ರಕ್ಷಣೆಗೆ ತೆರಳಿದ್ದ ಗೋಪಾಲಕ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಹೋಬಳಿಯ ತಾವರೆಕೆರೆಯಲ್ಲಿ ನಡೆದಿದೆ.
ಲೋಕೇಶ್ ಮೃತ ಗೋಪಾಲಕ. ಮನೆಯ ನೀರು ಕಾಯಿಸುವ ಒಲೆಯಿಂದ ಅಗ್ನಿ ಇಡೀ ಕೊಟ್ಟಿಗೆಗೆ ವ್ಯಾಪಿಸಿದೆ. ಈ ವೇಳೆ ಹಸುಗಳ ರಕ್ಷಣೆಗೆ ಹೋದ ಲೋಕೇಶ್ ಗಾಯಗೊಂಡಿದ್ದು, ದೇಹ ಶೇ 90ರಷ್ಟು ಸುಟ್ಟು ಹೋಗಿತ್ತು. ತಕ್ಷಣ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.