ಕರ್ನಾಟಕ

karnataka

By

Published : Apr 20, 2019, 6:14 PM IST

ETV Bharat / state

ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ

ನಿನ್ನೆ ಭಾರಿ ಗಾಳಿ ಮಳೆಯಿಂದಾಗಿ ಮನೆಯ ಮೇಲೆ ತೆಂಗಿನಮರ ಬಿದ್ದ ಪರಿಣಾಮ ಮನೆಯ ಮೇಲ್ಛಾಣಿಯ ಸಿಮೆಂಟ್ ಶೀಟ್​ಗಳು ಜಖಂಗೊಂಡಿರುವ ಘಟನೆ ನೆಲಮಂಗಲ ಸಮೀಪದ ಕುದೂರು ಹೋಬಳಿಯಲ್ಲಿ ನಡೆದಿದೆ.

ಮನೆ ಮೇಲೆ ಬಿದ್ದ ತೆಂಗಿನಮರ

ನೆಲಮಂಗಲ:ಭಾರಿ ಗಾಳಿ ಮಳೆಗೆ ಮನೆ ಮೇಲೆ ತೆಂಗಿನಮರ ಬಿದ್ದು ಮೇಲ್ಛಾವಣಿ ಹಾನಿಯಾಗಿ ಸುಮಾರು 40 ಸಾವಿರ ನಷ್ಟವಾಗಿರುವ ಘಟನೆ ನೆಲಮಂಗಲ ಸಮೀಪದ ಕುದೂರು ಹೋಬಳಿಯ ಬೆಟ್ಟಹಳ್ಳಿ‌ಪಾಳ್ಯ ಗ್ರಾಮದಲ್ಲಿ ನಡೆದಿದೆ.

ನಿನ್ನೆ ಭಾರಿ ಗಾಳಿ ಮಳೆಯಿಂದಾಗಿ ಮನೆಯ ಮೇಲೆ ತೆಂಗಿನಮರ ಬಿದ್ದ ಪರಿಣಾಮ ಮನೆಯ ಮೇಲ್ಛಾವಣಿಯ ಸಿಮೆಂಟ್ ಶೀಟ್​ಗಳು ಜಖಂಗೊಂಡಿವೆ. ಮರಿಸ್ವಾಮಯ್ಯ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಮೇಲ್ಛಾವಣಿ ಸಂಪೂರ್ಣ ನಾಶವಾಗಿದೆ.

ಮನೆ ಮೇಲೆ ಬಿದ್ದ ತೆಂಗಿನಮರ

ಸುಮಾರು 40 ಸಾವಿರದಷ್ಟು ನಷ್ಟವಾಗಿದೆ ಎಂದು ಕುಟುಂಬದ ಸದಸ್ಯರು ತಮ್ಮ ಅಳಲು ತೋಡಿಕೊಂಡಿದ್ದು, ಘಟನೆಗೆ ಸೂಕ್ತ ಪರಿಹಾರ ನೀಡಬೇಕೆಂಬುದು ಕುಟುಂಬಸ್ಥರ ಆಗ್ರಹವಾಗಿದೆ.

For All Latest Updates

TAGGED:

ABOUT THE AUTHOR

...view details