ಕರ್ನಾಟಕ

karnataka

ETV Bharat / state

ಅತ್ತಿಬೆಲೆ ಗಡಿಯಲ್ಲಿ ಟೈರ್​ಗೆ ಬೆಂಕಿ ಹಚ್ಚಿ, ಕಲ್ಲು ತೂರಿದ ಕರವೇ ಕಾರ್ಯಕರ್ತರು - ಮಾರಾಠ ಅಭಿವೃದ್ದಿ ಪ್ರಾಧಿಕಾರ ವಿರೋಧಿಸಿ ಪ್ರತಿಭಟನೆ

ಮರಾಠ ಅಭಿವೃದ್ದಿ ಪ್ರಾಧಿಕಾರ ರಚನೆ ವಿರೋಧಿಸಿ‌ ಅತ್ತಿಬೆಲೆ ಗಡಿಯಲ್ಲಿ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ಮುಂದುವರೆಸಿದ್ದು, ಟೈರ್​ಗೆ ಬೆಂಕಿ ಹಚ್ಚಿ, ಬಸ್​ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

Protest against Maratha Development Authority
ಅತ್ತಿಬೆಲೆ ಗಡಿಯಲ್ಲಿ ಟೈಯರ್​ಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ ಕರವೇ ಕಾರ್ಯಕರ್ತರು

By

Published : Dec 5, 2020, 2:07 PM IST

ಆನೇಕಲ್​(ಬೆಂ.ಗ್ರಾಮಾಂತರ):ಮರಾಠ ಅಭಿವೃದ್ದಿ ಪ್ರಾಧಿಕಾರ ರಚನೆ ವಿರೋಧಿಸಿ‌ ಅತ್ತಿಬೆಲೆ ಗಡಿಯಲ್ಲಿ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ಮುಂದುವರೆಸಿದ್ದಾರೆ.

ಅತ್ತಿಬೆಲೆ ಗಡಿಯಲ್ಲಿ ಟೈರ್​ಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ ಕರವೇ ಕಾರ್ಯಕರ್ತರು

ಬೊಮ್ಮಸಂದ್ರ ಹೆದ್ದಾರಿಯಲ್ಲಿ ನಾರಾಯಣಗೌಡ ಬಣದ ಗಜೇಂದ್ರ ನೇತೃತ್ವದಲ್ಲಿ ಕಾರ್ಯಕರ್ತರು ಟೈರ್​ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಹೊಸೂರು ಮುಖ್ಯರಸ್ತೆಯ ಚಂದಾಪುರದ ಶನಿವಾರ ಸಂತೆಗೆ ಬೆಳಗ್ಗೆ ಬಂದ್ ಬಿಸಿ ತಟ್ಟಲಿಲ್ಲ. ಹೀಗಾಗಿ ಜನರು ವ್ಯಾಪಾರದಲ್ಲಿ ನಿರತರಾಗಿದ್ದು ಕಂಡುಬಂತು. ಬಳಿಕ ಚಂದಾಪುರ ಬಿಎಂಟಿಸಿ ನಿಲ್ದಾಣದ ಬಳಿ ಆಗಮಿಸಿದ ಕಾರ್ಯಕರ್ತರು, ರೂಟ್ ನಂಬರ್ 600ರ ಬಸ್ ಮೇಲೆ ಕಲ್ಲು ತೂರಿದರು. ಇದರಿಂದಾಗಿ ಬಸ್​ನ ಹಿಂಬದಿಯ ಗಾಜು ಹಾಗೂ ಸೈಡ್ ಮಿರರ್ ಪುಡಿ-ಪುಡಿಯಾಗಿದೆ.

ಓದಿ:ಯಡಿಯೂರಪ್ಪ ಒಬ್ಬ ಹಿಟ್ಲರ್.. ಸಿಎಂ ವಿರುದ್ಧ ವಾಟಾಳ್ ನಾಗರಾಜ್ ಆಕ್ರೋಶ

ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದಿಂದ ಆನೇಕಲ್ ಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.

For All Latest Updates

TAGGED:

ABOUT THE AUTHOR

...view details