ಕರ್ನಾಟಕ

karnataka

By

Published : Nov 28, 2020, 10:55 AM IST

Updated : Nov 28, 2020, 11:10 AM IST

ETV Bharat / state

ದೆಹಲಿಯಲ್ಲಿ ಸಿ.ಟಿ. ರವಿ ಭೇಟಿ ಮಾಡಿ ಬೆಂಗಳೂರಿಗೆ ಮರಳಿದ ಡಿಸಿಎಂ - ಸಚಿವರು

ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಸಿ.ಟಿ. ರವಿ ದೆಹಲಿಯ ತಮ್ಮ ಕಚೇರಿಯಲ್ಲಿ ಪೂಜಾ ಕಾರ್ಯಕ್ರಮ ಇಟ್ಟುಕೊಂಡಿದ್ದರು. ಈ ಹಿನ್ನೆಲೆ ಡಿಸಿಎಂ ಲಕ್ಷಣ ಸವದಿ ಮತ್ತು ಕಂದಾಯ ಸಚಿವ ಆರ್. ಅಶೋಕ್ ದೆಹಲಿಗೆ ಹೋಗಿ ಬಂದಿದ್ದಾರೆ.

lakshman savadi, r ashok came back from Delhi
ದೆಹಲಿಯಲ್ಲಿ ಸಿ.ಟಿ. ರವಿ ಭೇಟಿ ಮಾಡಿ ಬೆಂಗಳೂರಿಗೆ ಮರಳಿದ ಡಿಸಿಎಂ-ಸಚಿವ

ದೇವನಹಳ್ಳಿ: ಕಚೇರಿ ಪೂಜೆ ಸಲುವಾಗಿ ಸಿ.ಟಿ. ರವಿ ಬುಲಾವ್ ಮೇರೆಗೆ ದೆಹಲಿಗೆ ತೆರಳಿದ್ದ ಡಿಸಿಎಂ ಲಕ್ಷಣ ಸವದಿ ಮತ್ತು ಕಂದಾಯ ಸಚಿವ ಆರ್. ಅಶೋಕ್ ನಿನ್ನೆ ರಾತ್ರಿ 11:50 ಗಂಟೆಗೆ ಹೊರಟ ವಿಮಾನದ ಮೂಲಕ ಕೆಂಪೇಗೌಡ ಏರ್ಪೋರ್ಟ್​​ಗೆ ಮರಳಿದರು. ಅಲ್ಲಿಂದ ನೇರವಾಗಿ ತಮ್ಮ ಮನೆಗಳತ್ತ ಪ್ರಯಾಣ ಬೆಳೆಸಿದರು.

ಬೆಂಗಳೂರಿಗೆ ಮರಳಿದ ಡಿಸಿಎಂ - ಸಚಿವ

ಮಾಧ್ಯಮದೂಂದಿಗೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಆತ್ಮೀಯರು ಮತ್ತು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಸಿ.ಟಿ. ರವಿ ದೆಹಲಿಯ ತಮ್ಮ ಕಚೇರಿಯಲ್ಲಿ ಪೂಜಾ ಕಾರ್ಯಕ್ರಮ ಇಟ್ಟುಕೊಂಡಿದ್ದರು. ಈ ಹಿನ್ನೆಲೆ ದೆಹಲಿಗೆ ಹೋಗಿ ಬಂದಿದ್ದೇನೆ. ಇದೇ ವೇಳೆ, ರೈಲ್ವೆ ಸಚಿವ ಪಿಯೂಷ್ ಗೋಯಲ್, ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರನ್ನು ಭೇಟಿ ಮಾಡಿದ್ದು, ಬೆಂಗಳೂರಿನ ರಸ್ತೆ ಅಗಲೀಕರಣಕ್ಕೆ ಏರ್ಪೋಸ್ ಮತ್ತು ಮಿಲಿಟರಿಯಿಂದ ಭೂಮಿ ನೀಡಲು ಮನವಿ ನೀಡಿ ಬಂದಿದ್ದೇನೆಂದು ತಿಳಿಸಿದರು.

ಇದನ್ನು ಓದಿ:ಕಾಫಿನಾಡಿನ ಜನತೆಗೆ ಭಾವನಾತ್ಮಕ ಪತ್ರ ಬರೆದ ಸಿ ಟಿ ರವಿ

ದೆಹಲಿಗೆ ಹೋಗಿ ಒಳ್ಳೆ ಪ್ರವಾಸ ಮಾಡಿ ಬಂದಿದ್ದೇನೆ. ರಾಜ್ಯ ರಾಜಕೀಯದ ಬಗ್ಗೆ ನಾನು ತಲೆಕೆಡೆಸಿಕೊಂಡಿಲ್ಲ. ರಾಜಕೀಯದ ಬಗ್ಗೆ ಮಾತನಾಡಿಲ್ಲ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು. ಇನ್ನೂ, ರಮೇಶ್ ಜಾರಕಿಹೊಳಿ ದೆಹಲಿ ಪ್ರವಾಸದ ಬಗ್ಗೆ ಮಾತನಾಡಿ, ಅವರು ಏಕೆ ಹೋಗಿ ಬರ್ತಾರೆ ಅಂತಾ ನನಗೆ ಗೊತ್ತಿಲ್ಲ. ಎಂಟಿಬಿ ನಾಗರಾಜ್​​ಗೆ ಸಚಿವ ಸ್ಥಾನ ನೀಡಬೇಕೆಂದು ಇರಬೇಕು ಅನ್ನೋದು ನನ್ನ ಅಭಿಪ್ರಾಯ ಎಂದರು.

Last Updated : Nov 28, 2020, 11:10 AM IST

ABOUT THE AUTHOR

...view details