ಕರ್ನಾಟಕ

karnataka

By

Published : Oct 14, 2020, 8:23 PM IST

ETV Bharat / state

ಮಾಗಡಿ ಮಾಜಿ ಶಾಸಕ ಬಾಲಕೃಷ್ಣ ವಿರುದ್ಧ ಭೂ ಕಬಳಿಕೆ ಆರೋಪ

ಜಮೀನನ್ನು ಸ್ವಾಧೀನದಲ್ಲಿರುವ ರೈತರಿಗೆ ತಿಳಿಯದೇ ಹರಾಜು ಪ್ರಕ್ರಿಯೆಯಲ್ಲಿ ಅಕ್ರಮವಾಗಿ ಜನತಾ ಎಜುಕೇಷನ್ ಸೊಸೈಟಿಯವರು ಖರೀದಿಸಿದ್ದಾರೆ ಎಂದು ರೈತರು ಆರೋಪ ಮಾಡುತ್ತಿದ್ದಾರೆ.

Former Magadhi MLA Balakrishna accused of land acquired
ಮಾಗಡಿ ಮಾಜಿ ಶಾಸಕ ಬಾಲಕೃಷ್ಣ ವಿರುದ್ಧ ಭೂ ಕಬಳಿಕೆ ಆರೋಪ

ನೆಲಮಂಗಲ: ಮಾಗಡಿ ಮಾಜಿ ಶಾಸಕ ಬಾಲಕೃಷ್ಣ ವಿರುದ್ಧ ಪದೇ ಪದೆ ಭೂ ಕಬಳಿಕೆ ಆರೋಪಗಳು ಕೇಳಿ ಬರುತ್ತಿವೆ. 2007ರಲ್ಲಿ ಶಾಸಕರಾಗಿದ್ದಾಗ ತಾವೇ ಅಧ್ಯಕ್ಷರಾಗಿರುವ ಜನತಾ ಎಜುಕೇಷನ್ ಸೊಸೈಟಿ ಹೆಸರಿನಲ್ಲಿ ಕೋಟಿ ಕೋಟಿ ಬೆಲೆಬಾಳುವ ಗೋಮಾಳ ಜಮೀನನ್ನು ಹರಾಜು ಪ್ರಕ್ರಿಯೆಯಲ್ಲಿ ಖರೀದಿಸಿದ್ದು, ನಮಗೆ ಅನ್ಯಾಯ ಆಗಿದೆ, ನ್ಯಾಯ ಒದಗಿಸಿ ಎಂದು ರೈತರು ಮನವಿ ಮಾಡಿದ್ದರು. ಆದರೆ ಶಾಸಕರು ಪೊಲೀಸರ ನೆರವು ಪಡೆದು ಸ್ವಾಧೀನಕ್ಕೆ ಬರಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಜಮೀನನ್ನು ಸ್ವಾಧೀನದಲ್ಲಿರುವ ರೈತರಿಗೆ ತಿಳಿಯದೇ ಹರಾಜು ಪ್ರಕ್ರಿಯೆಯಲ್ಲಿ ಅಕ್ರಮವಾಗಿ ಜನತಾ ಎಜುಕೇಷನ್ ಸೊಸೈಟಿಯವರು ಖರೀದಿಸಿದ್ದಾರೆ ಎಂದು ರೈತರು ಆರೋಪ ಮಾಡುತ್ತಿದ್ದಾರೆ.

ಮಾಗಡಿ ಮಾಜಿ ಶಾಸಕ ಬಾಲಕೃಷ್ಣ ವಿರುದ್ಧ ಭೂ ಕಬಳಿಕೆ ಆರೋಪ

ಬೆಂಗಳೂರು ಉತ್ತರ ತಾಲೂಕು ಲಕ್ಷ್ಮೀಪುರ ಗ್ರಾಮದ ಸರ್ವೆ ನಂಬರ್ 52ರ 6 ಎಕರೆ 17 ಕುಂಟೆ ಜಮೀನು ಈ ವಿವಾದಕ್ಕೆ ಕಾರಣವಾಗಿದೆ. 2007ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಸರ್ಕಾರಿ ಗೋಮಾಳಗಳ ಹರಾಜು ಪ್ರಕ್ರಿಯಲ್ಲಿ ಪ್ರಭಾವ ಬಳಸಿ ಮಾಗಡಿ ಮಾಜಿ ಶಾಸಕ ಬಾಲಕೃಷ್ಣ ಅಧ್ಯಕ್ಷರಾಗಿರುವ ಜನತಾ ಎಜುಕೇಷನ್ ಸೊಸೈಟಿ 2 ಕೋಟಿಗೆ ಹೆಚ್ಚಿನ ಬಿಡ್ ಮಾಡಿ ಜಮೀನು ಖರೀದಿ ಮಾಡಿತ್ತು. ಆದರೆ ಇದುವರೆಗೂ ಸ್ವಾಧೀನಕ್ಕೆ ಬಂದಿರುವುದಿಲ್ಲ. ಜಮೀನನ್ನು ಖುದ್ದು ಜಿಲ್ಲಾಡಳಿತ ಮುಂದೆ ನಿಂತು ಜಮೀನನ್ನು ಸೊಸೈಟಿಗೆ ಗುರುತಿಸಿ ನೀಡಿರುತ್ತಾರೆ. ನ್ಯಾಯಾಲಯದ ಆದೇಶದ ಪ್ರಕಾರ ಸ್ವಾಧೀನಕ್ಕೆ ಮುಂದಾದ ವೇಳೆ ಜಮೀನು ಅನುಭವದಲ್ಲಿದ್ದ ರೈತರು ತಡೆದಿದ್ದಾರೆ.

ಸುಮಾರು 60 ವರ್ಷದಿಂದ ಸ್ವಾಧೀನದಲ್ಲಿದ್ದ ಹನುಮನರಸಯ್ಯ ಹಾಗೂ ಇತರೆ ನಾಲ್ಕೈದು ರೈತ ಕುಟುಂಬಗಳಿಗೆ ಇದೆಲ್ಲದರ ಬಗ್ಗೆ ಮಾಹಿತಿ ಇಲ್ಲದೆ, ಏಕಾ ಏಕಿ ಜಮೀನು ಪರರ ಪಾಲು ಆಗುತ್ತಿದೆ ಎಂದು ಗಾಬರಿಗೊಂಡು, ಕಳೆದ ಕೆಲ ದಿನಗಳ ಹಿಂದೆ ರೈತರ ಕುಟುಂಬದವರು ಜಿಲ್ಲಾ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ಆದರೆ ಈಗ ಮತ್ತೆ ಹೈ ಕೋರ್ಟ್​ನಲ್ಲಿ ತಡೆಯಾಜ್ಞೆಗೆ ಅರ್ಜಿ ಸಲ್ಲಿಸಿದ್ದು, ಕೋವಿಡ್ ಕಾರಣ ನ್ಯಾಯಾಲಯದಲ್ಲಿ ಅರ್ಜಿ ವಿಲೇವಾರಿ ತಡವಾಗಿದೆ, ನಮಗೆ ಸಮಯ ಕೊಡಿ ಎಂದು ಮನವಿ ಮಾಡಿದರೂ ಸಮಯಾವಕಾಶ ನೀಡುತ್ತಿಲ್ಲ, ನಮಗೆ ನ್ಯಾಯ ಕೊಡಿಸಿ ಎಂದು ರೈತರು ಮನವಿ ಮಾಡಿಕೊಂಡಿದ್ದಾರೆ.

ನಾವು ಭೂಮಿಗೆ ಕಂದಾಯ ಕಟ್ಟಿದ್ದೇವೆ, ಉಳುಮೆ ಚೀಟಿ ಪಡೆದಿದ್ದೀವೆ, ಗ್ರಾಂಟ್ ಸರ್ಟಿಫಿಕೇಟ್ ಸಹ ಕೊಟ್ಟಿದ್ದಾರೆ. ಆದರೆ ನಮ್ಮ ಬಳಿ ಹಣ ಇಲ್ಲದ ಕಾರಣ ನಮ್ಮ ಹೆಸರಿಗೆ ಜಮೀನು ಮಾಡಿಕೊಳ್ಳಲು ಆಗಿಲ್ಲ ಎಂದಿದ್ದಾರೆ. ಅಲ್ಲದೆ ಪ್ರಭಾವಿಗಳು ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಜಮೀನು ಖರೀದಿಸಿದ್ದಾರೆ ಎಂದು ಮಾಜಿ ಶಾಸಕ ಬಾಲಕೃಷ್ಣ ವಿರುದ್ಧ ರೈತರು ಕಿಡಿ ಕಾರಿದರು. ಜನತಾ ಎಜುಕೇಷನ್ ಸೊಸೈಟಿಯವರು ಮಾದನಾಯಕನಹಳ್ಳಿ ಪೊಲೀಸರ ರಕ್ಷಣೆ ಪಡೆದು ಜಮೀನು ವಶಪಡಿಸಿಕೊಳ್ಳಲು ಮುಂದಾಗಿದ್ದು, ರೈತರು ನ್ಯಾಯ ಒದಗಿಸಿ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ABOUT THE AUTHOR

...view details