ನೆಲಮಂಗಲ: ಸರ್ಕಾರಿ ಆಸ್ಪತ್ರೆಯಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಚಾಕು ಹಿಡಿದು ಗದ್ದಲ ಮಾಡಿ ಆಸ್ಪತ್ರೆಗೆ ಬಂದಿದ್ದ ರೋಗಿಗಳಿಗೆ ಮತ್ತು ಆಸ್ಪತ್ರೆಯ ಸಿಬ್ಬಂದಿಯನ್ನ ಆತಂಕಕ್ಕೀಡು ಮಾಡಿರುವ ಘಟನೆ ನೆಲಮಂಗಲ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಮಾಗಡಿ ತಾಲೂಕಿನ ಮೋಟಗಾನಹಳ್ಳಿ ಮೂಲದ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ವೆಂಕಟೇಶ್ ಮೂರ್ತಿ ಎಂಬಾತ ಮಾನಸಿಕ ಅಸ್ವಸ್ಥನಂತೆ ಆಡುತ್ತಿದ್ದು, ಕೈಯಲ್ಲಿ ಚಾಕುವೊಂದನ್ನು ಹಿಡಿದು ಆಸ್ಪತ್ರೆಯಲ್ಲಿ ಕೂಗಾಡುತ್ತಾ ಓಡಾಡುತ್ತಿದ್ದ. ಇದರಿಂದ ಆಸ್ಪತ್ರೆಗೆ ಬಂದಿದ್ದ ರೋಗಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿ ಆತಂಕಗೊಂಡು ನೆಲಮಂಗಲ ಪುರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.