ಕರ್ನಾಟಕ

karnataka

ETV Bharat / state

ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ಅಪಾಯದಿಂದ ಕಂದಮ್ಮ ಪಾರು

ಹೊರಗಿನಿಂದ ಬಾಗಿಲಿಗೆ ಚಿಲಕ ಹಾಕಿ ಪೆಟ್ರೋಲ್ ಸುರಿದಿರುವ ಶಂಕೆ ವ್ಯಕ್ತವಾಗಿದೆ. ದಾಬಸ್‌ಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

By

Published : Dec 11, 2022, 11:47 AM IST

Updated : Dec 11, 2022, 12:30 PM IST

miscreants poured petrol and set fire to house in nelamangala
ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ ದುರ್ಷ್ಕಮಿಗಳು

ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ನೆಲಮಂಗಲ:ಇಲ್ಲಿನಪುರುಷೋತ್ತಮ್​ ಎಂಬವರ ಮನೆಗೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಸಮೀಪದ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಪುರುಷೋತ್ತಮ್ ಹಾಗೂ ಅವರ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮನೆಯಲ್ಲಿದ್ದ 3 ತಿಂಗಳ ಕಂದಮ್ಮ ಪ್ರಾಣಾಪಾಯದಿಂದ ಪಾರಾಗಿದೆ.

ತಡರಾತ್ರಿ ಘಟನೆ ನಡೆದಿದೆ. ಮನೆಯನ್ನು ಬೆಂಕಿ‌ ಆವರಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಹೊರಗಿನಿಂದ ಬಾಗಿಲಿಗೆ ಚಿಲಕ ಹಾಕಿ ಪೆಟ್ರೋಲ್ ಸುರಿದಿರುವ ಶಂಕೆಯಿದೆ. ದಾಬಸ್‌ಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಗೆ ಬೆಂಕಿ ಹಚ್ಚಿದ್ದು ಯಾರು, ಬೆಂಕಿ ಹಚ್ಚಲು ಕಾರಣವೇನು ಎನ್ನುವುದು ಪೊಲೀಸರ ತನಿಖೆಯಿಂದ ಹೊರಬರಬೇಕು.

ಇದನ್ನೂ ಓದಿ:ಚಿಕ್ಕಮಗಳೂರು: ರಾಕೆಟ್​ ಪಟಾಕಿಯ ಕಿಡಿ ತಗುಲಿ ಮನೆ ಬೆಂಕಿಗಾಹುತಿ

Last Updated : Dec 11, 2022, 12:30 PM IST

ABOUT THE AUTHOR

...view details