ಕರ್ನಾಟಕ

karnataka

By

Published : Oct 18, 2020, 9:44 PM IST

ETV Bharat / state

ಹೊಟ್ಟೆನೋವು ತಾಳಲಾರದೆ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು

ವಿಪರೀತ ಹೊಟ್ಟೆನೋವು ತಾಳಲಾರದೆ ನರ್ಸಿಂಗ್​ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನೆಲಮಂಗಲ ತಾಲೂಕಲ್ಲಿ ನಡೆದಿದೆ.

nursing student suicide
ನರ್ಸಿಂಗ್  ವಿದ್ಯಾರ್ಥಿನಿ  ನೇಣಿಗೆ ಶರಣು

ನೆಲಮಂಗಲ: ಹೊಟ್ಟೆ ನೋವು ತಾಳಲಾರದೆ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲ ತಾಲೂಕಿನ ವಾಜರಹಳ್ಳಿಯಲ್ಲಿ ನಡೆದಿದೆ.

ಚೈತ್ರಾ(19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಮೃತ ಯುವತಿ ವಾಜರಹಳ್ಳಿ ಗ್ರಾಮ ಪಂಚಾಯತ್​ ಮಾಜಿ ಅಧ್ಯಕ್ಷೆ ಮಂಜುಳ ಎಂಬುವರ ಪುತ್ರಿ.

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ರೂಮ್​ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details