ಕರ್ನಾಟಕ

karnataka

ETV Bharat / state

ಬಿಜೆಪಿ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ ರಾಮ್‌ಲಾಲ್​​

ಬಿಜೆಪಿ ಲೋಕಸಭೆ ಚುನಾವಣೆಯ ಪೂರ್ವ ತಯಾರಿ ನಡೆಸಿದ್ದು ಬೆಂಗಳೂರಿನಲ್ಲಿ ಇಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್​ಲಾಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ.

By

Published : Feb 5, 2019, 1:02 PM IST

ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್​ಲಾಲ್

ದೇವನಹಳ್ಳಿ: ಇಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್​ಲಾಲ್ ಆಗಮಿಸಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಮ್‌ಲಾಲ್, ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದರು.ರಾಮ್​ಲಾಲ್ ಅವರನ್ನು ಕರೆದುಕೊಂಡು ಹೋಗಲು ಬಂದಿದ್ದ ಎಂಎಲ್‌ಸಿ ನಾರಾಯಣಸ್ವಾಮಿ ಕಾಲಿಗೆ ಬಿದ್ದು ನಮಸ್ಕರಿಸಿದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್​ಲಾಲ್

ಬಿಜೆಪಿಯಲ್ಲಿ ಚುನಾವಣೆ, ಪಕ್ಷದ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿವೆ. ಈ ಸಭೆ ರಾಮ್​ಲಾಲ್‌ ನೇತೃತ್ವದಲ್ಲಿ ನಡೆಯಲಿದ್ದು, ಲೋಕಸಭೆ ಚುನಾವಣೆಯ ಪೂರ್ವ ತಯಾರಿ, ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಕರ್ನಾಟಕದಿಂದ ಹೆಚ್ಚು ಸ್ಥಾನ ಗೆಲ್ಲಿಸಿಕೊಡಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ನಾಯಕರಲ್ಲಿ ಸಕಾರಾತ್ಮಕ‌ ಪ್ರತಿಫಲ ಪಡೆಯಲು ಈ ಸಭೆ ನಡೆಯಲಿದೆ ಎನ್ನಲಾಗುತ್ತಿದೆ.

ಇದಲ್ಲದೇ ಆಡಳಿತ ಪಕ್ಷದ‌ ನ್ಯೂನ್ಯತೆಯ ಬಗ್ಗೆ ತಿಳಿದು, ಅವರ ಅಡಳಿತ ವೈಫಲ್ಯವನ್ನು ಜನರಿಗೆ ತಿಳಿಸುವಂತೆ ಮಾಡುವುದರ ಜೊತೆಯಲ್ಲಿ ಕೆಳ‌ಹಂತದಿಂದ‌ ಪಕ್ಷವನ್ನು ಬಲಿಷ್ಠ ಮಾಡಬೇಕು ಅನ್ನೋ ಉದ್ದೇಶ ಕೂಡ ಈ ಸಭೆಯಲ್ಲಿ ಚರ್ಚೆ ಆಗಲಿದೆ. ಅಲ್ಲದೆ ಲೋಕಸಭಾ ಅಭ್ಯರ್ಥಿಗಳ ಆಯ್ಕೆ ಕೂಡ ಈ ಸಂದರ್ಭದಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ABOUT THE AUTHOR

...view details