ಕರ್ನಾಟಕ

karnataka

ETV Bharat / state

ಹಿಂಬದಿಯಿಂದ ಬೈಕ್​ಗೆ ಲಾರಿ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೆ ಸಾವು - undefined

ಕೆಲಸ ಮುಗಿಸಿ ಬೈಕ್​ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಹಿಂಬಂದಿಯಿಂದ ಬಂದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೆ ಸಾವೀಗಿಡಗಿರುವ ಘಟನೆ ನಡೆದಿದೆ.

ಕಾಂತರಾಜು​,ಮೃತ ವ್ಯಕ್ತಿ

By

Published : Apr 28, 2019, 10:36 AM IST

ನೆಲಮಂಗಲ: ಬೈಕ್​ಗೆ ಹಿಂಬದಿಯಿಂದ ಬರುತ್ತಿದ್ದ ಲಾರಿ ಗುದ್ದಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಕೆರೆಕತ್ತಿಗನೂರು ಬಳಿ ಘಟನೆ ನಡೆದಿದೆ.

ಕಾಂತರಾಜು,ಮೃತ ವ್ಯಕ್ತಿ

ಕಾಂತರಾಜು (30) ಮೃತ ವ್ಯಕ್ತಿ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆ ಅಪಘಾತ ನಡೆದಿದ್ದು, ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ಬೈಕ್​ಗೆ ಲಾರಿ ಹಿಂಬದಿಯಿಂದ ಗುದ್ದಿದೆ. ಪರಿಣಾಮ ಲಾರಿಯ ಚಕ್ರಕ್ಕೆ ಸಿಲುಕಿದ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details