ಕರ್ನಾಟಕ

karnataka

ನೆಲಮಂಗಲ : ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು

ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ಕೆಸರಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ, ನೆಲಮಂಗಲದ ಹತ್ತುಕುಂಟೆಪಾಳ್ಯ ಕಾಲೋನಿಯಲ್ಲಿ ನಡೆದಿದೆ.

By

Published : May 18, 2020, 9:34 PM IST

Published : May 18, 2020, 9:34 PM IST

student death in nelamangala
ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು

ನೆಲಮಂಗಲ (ಬೆ.ಗ್ರಾಮಾಂತರ):ಶಾಲಾ-ಕಾಲೇಜುಗಳಿಗೆ ರಜೆಯಿದ್ದ ಹಿನ್ನೆಲೆ, ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ಕೆಸರಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಹತ್ತುಕುಂಟೆಪಾಳ್ಯ ಕಾಲೋನಿಯ ಪುರುಷೋತ್ತಮ ಬಿನ್ ನಾಗರಾಜು (14 ) ಹಾಗೂ ನಾಗೇಶ ಬಿನ್ ನರೇಶ್ (17), ಮೃತ ವಿದ್ಯಾರ್ಥಿಗಳಾಗಿದ್ದಾರೆ.

ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು

ಇನ್ನು ಪುರುಷೋತ್ತಮ 10ನೇ ತರಗತಿ ಹಾಗೂ ನಾಗೇಶ್ ಐಟಿಐ ವ್ಯಾಸಂಗ ಮಾಡುತ್ತಿರುವುದಾಗಿ ತಿಳಿದುಬಂದಿದೆ. ಶಾಲಾ-ಕಾಲೇಜುಗಳಿಗೆ ರಜೆಯಿದ್ದ ಕಾರಣ ಇಬ್ಬರು ಕೆರೆಯಲ್ಲಿ ಈಜಲು ಹೋಗಿದ್ದಾರೆ. ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದು, ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

ABOUT THE AUTHOR

...view details