ದೊಡ್ಡಬಳ್ಳಾಪುರ:ಸ್ನೇಹಿತರ ಜೊತೆ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಬಾಲಕನ ಸಾವು ಅನುಮಾನಾಸ್ಪದವೆಂದು ದೂರು ಬಂದ ಹಿನ್ನೆಲೆ ಹೂತಿದ್ದ ಶವ ಹೊರತೆಗೆದು ತಹಶೀಲ್ದಾರ್ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಯಿತು.
ಸಾವಿನ ಸುತ್ತ ಅನುಮಾನದ ಹುತ್ತ... ಹೂತಾಕಿದ್ದ ಬಾಲಕನ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ!
ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ಸ್ನೇಹಿತರ ಜೊತೆ ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ. ಈ ಸಾವಿನ ಕುರಿತು ಅನುಮಾನ ಬಂದ ಹಿನ್ನೆಲೆ ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿರುವ ಪ್ರಕರಣ ದೊಡ್ಡಬಳ್ಳಾಪುರ ತಾಲೂಕಲ್ಲಿ ನಡೆದಿದೆ.
ಹೂತ್ತಿದ್ದ ಬಾಲಕನ ಶವ ಹೊರ ತೆಗೆದು ಶವ ಪರೀಕ್ಷೆ
ಆದ್ರೆ, ಕೆರೆಯ ಮೀನು ಹಿಡಿಯುವ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರ ಬಾಲಕನ ಸಾವು ಅನುಮಾನಾಸ್ಪದವೆಂದು ಉಪ ವಿಭಾಗಾಧಿಕಾರಿಯವರಿಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ತಹಶೀಲ್ದಾರ್ ಶಿವರಾಜ್ ನೇತೃತ್ವದಲ್ಲಿ ವೈದ್ಯರ ತಂಡದಿಂದ ಶವ ಪರೀಕ್ಷೆ ನಡೆಸಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.