ದೊಡ್ಡಬಳ್ಳಾಪುರ : ಕುಡುಕ ಗಂಡನಿಗೆ ಬುದ್ಧಿ ಕಲಿಸಬೇಕೆಂದು ಆಕೆ ಮಕ್ಕಳೊಂದಿಗೆ ಮನೆ ಬಿಟ್ಟಳು. ಇದರಿಂದ ಮನನೊಂದ ಗಂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಪಸ್ಸಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಶೋಕ್( 30) ನೇಣಿಗೆ ಶರಣಾಗಿರುವ ವ್ಯಕ್ತಿ. ಮದ್ಯವ್ಯಸನಿಯಾಗಿದ್ದ ಅಶೋಕ, ದಿನನಿತ್ಯ ಮನೆಗೆ ಕುಡಿದಿಕೊಂಡು ಬರುತ್ತಿದ್ದ. ಕುಡುಕ ಗಂಡನ ವರ್ತನೆಯಿಂದ ರೋಸಿ ಹೋಗಿದ್ದ ಹೆಂಡತಿ, ಗಂಡನಿಗೆ ಪಾಠ ಕಲಿಸಲು ಮುಂದಾದಳು. ಹೀಗಾಗಿ ಎರಡು ತಿಂಗಳ ಹಿಂದೆ ಗಂಡನ ಮನೆ ಬಿಟ್ಟು, ಮಕ್ಕಳೊಂದಿಗೆ ತವರು ಮನೆ ಸೇರಿದ್ದಳು.