ಕರ್ನಾಟಕ

karnataka

ETV Bharat / state

ದೇವಾಲಯಕ್ಕೆ ನುಗ್ಗಿ ಹುಂಡಿಗಳನ್ನು ದೋಚಿ ಪರಾರಿಯಾದ ಖದೀಮರು..! ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಆನೇಕಲ್​ ತಾಲೂಕು ತಮಿಳುನಾಡಿಗೆ ಹತ್ತಿರ ಇರುವುದರಿಂದ ಇಲ್ಲಿ ಕಳ್ಳರ ಕಾಟ ಹೆಚ್ಚು. ಮೇಲಿಂದ ಮೇಲೆ ಕಳ್ಳರು ತಮ್ಮ ಕೈಚಳಕ ತೋರಿಸುತ್ತಿದ್ದು ಇತ್ತೀಚೆಗೆ ತಾಲೂಕಿನ ದೇವಸ್ಥಾನಕ್ಕೆ ನುಗ್ಗಿದ ಖದೀಮರಿಬ್ಬರು ಹುಂಡಿಗಳನ್ನು ಎಗರಿಸುವ ಮೂಲಕ ಮತ್ತೆ ತಮ್ಮ ಖಯಾಲಿ ಮುಂದುವರೆಸಿದ್ದಾರೆ.

By

Published : Mar 30, 2019, 1:25 PM IST

ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

ಆನೇಕಲ್​:ಜೀರ್ಣೋದ್ಧಾರಗೊಂಡಿದ್ದ ದೇವಾಲಯಕ್ಕೆ ನುಗ್ಗಿದ ಕಳ್ಳರಿಬ್ಬರು ದೇವರ ಮುಂದೆ ಇಟ್ಟಿದ್ದ ಎರಡು ಹುಂಡಿಗಳನ್ನು ದೋಚಿ ಪರಾರಿಯಾದ ಘಟನೆ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ.

ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

ಸರ್ಜಾಪುರ - ಅತ್ತಿಬೆಲೆ ರಸ್ತೆಯ ಪಕ್ಕದಲ್ಲಿರುವ ದೇವಾಲಯಕ್ಕೆ ನುಗ್ಗಿ ಹುಂಡಿಗಳನ್ನು ದೋಚಿ ಪರಾರಿಯಾಗುತ್ತಿರುವ ದೃಶ್ಯ ದೇವಾಲಯದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುದ್ದಿ ತಿಳಿದು ಅತ್ತಿಬೆಲೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

ABOUT THE AUTHOR

...view details