ಕರ್ನಾಟಕ

karnataka

ETV Bharat / state

ದೇವನಹಳ್ಳಿ ಬಳಿ ಕಾರು ಪಲ್ಟಿ: ನಾಲ್ವರ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಪಲ್ಟಿಯಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.

By

Published : Jun 26, 2019, 7:06 PM IST

Updated : Jun 26, 2019, 9:26 PM IST

ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು:ಇನ್ನೋವಾ ಕಾರು ರಸ್ತೆ ಪಕ್ಕದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಒಂದು ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದ ರಾಷ್ಟ್ರಿಯ ಹೆದ್ದಾರಿ 7 ರ ಕನ್ನಮಂಗಲ ಪಾಳ್ಯ ಗೇಟ್ ಬಳಿ ನಡೆದಿದೆ.

ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

ಮೃತರನ್ನು ಯಲಹಂಕದ ಶಿವಕೋಟೆ ಗ್ರಾಮದ ಪಾರ್ವತಮ್ಮ (30), ನಾಗಮ್ಮ (32) , ಪಲ್ಸರ್ ಬೈಕ್ ಸವಾರ ಗುಡಿಬಂಡೆ ಠಾಣೆಯ ರೈಟರ್ ಶಶಿಕುಮಾರ್ (35) ಹಾಗೂ ಒಂದು ವರ್ಷದ ಮಗು ಅಂತ ಗುರುತಿಸಲಾಗಿದೆ. ಕಾರ್​ನಲ್ಲಿದ್ದ ಐವರಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ದೇವನಹಳ್ಳಿಯ ಪುಟ್ಟಪ್ಪನಗುಡಿ ಬೀದಿಯಲ್ಲಿ ಬೀಗರ ಊಟಕ್ಕಾಗಿ ಬಂದಿದ್ದರು. ಊಟ ಮುಗಿಸಿಕೊಂಡು ವಾಪಸ್ಸು ತೆರಳುವ ವೇಳೆ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಇನ್ನೂ ಈ ದುರ್ಘಟನೆಗೆ ಬೈಕ್ ಸವಾರನ ಅಜಾಗರೂಕತೆಯೇ ಕಾರಣ ಎನ್ನಲಾಗಿದೆ.

ಅಪಘಾತ ನಡೆದ ಸ್ಥಳಕ್ಕೆ ಏರ್ಪೋಟ್​ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನ ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಕೆಐಎಎಲ್ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

Last Updated : Jun 26, 2019, 9:26 PM IST

ABOUT THE AUTHOR

...view details