ಕರ್ನಾಟಕ

karnataka

ETV Bharat / state

ಸರಣಿ ಅಪಘಾತ: ತುಮಕೂರು-ಬೆಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಬೆಂಗಳೂರು ಹೊರವಲಯದ ನೆಲಮಂಗಲದ ರಾಷ್ಟ್ರೀಯ  ಹೆದ್ದಾರಿ 4ರ ತಾಳೆಕೆರೆ ಬಳಿ ಬೆಳ್ಳಂಬೆಳಗ್ಗೆ ಸಂಭವಿಸಿದ ಸರಣಿ ಅಪಘಾತದಿಂದ ತುಮಕೂರು-ಬೆಂಗಳೂರು ರಸ್ತೆಯಲ್ಲಿ ಎರಡೂ ಬದಿಯಲ್ಲಿ ಸುಮಾರು 5 ರಿಂದ 6 ಕಿ.ಮೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್ ನಿಯಂತ್ರಿಸಲು ನೆಲಮಂಗಲ ಪೊಲೀಸರು ಹರಸಾಹಸ ಪಟ್ಟರು.

By

Published : Mar 18, 2021, 10:46 AM IST

Traffic jam on Tumkur-Bangalore road
ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ

ನೆಲಮಂಗಲ (ಬೆಂಗಳೂರು ಗ್ರಾಮಾಂತರ):ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಸರಣಿ ಅಪಘಾತದಿಂದ ತುಮಕೂರು-ಬೆಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳು ಸಾಲುಗಟ್ಟಿ ನಿಂತಿದ್ದವು.

ತುಮಕೂರು-ಬೆಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಬೆಂಗಳೂರು ಹೊರವಲಯದ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 4ರ ತಾಳೆಕೆರೆ ಬಳಿ ಎರಡು ಲಾರಿ ಹಾಗೂ ಒಂದು ಕಾರಿನ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ಸರಣಿ ಅಪಘಾತದಿಂದ ಬೆಳಗ್ಗೆ ಕೆಲಸಕ್ಕೆ ತೆರಳಬೇಕಿದ್ದ ಸವಾರರು, ಗಂಟೆಗಟ್ಟಲೇ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಕಿರಿಕಿರಿ ಅನುಭವಿಸುವಂತಾಯಿತು.

ಎರಡೂ ಬದಿಯಲ್ಲಿ ಸುಮಾರು 5 ರಿಂದ 6 ಕಿ.ಮೀ ಟ್ರಾಫಿಕ್ ಜಾಮ್ ಆದ ಕಾರಣ ಟ್ರಾಫಿಕ್ ನಿಯಂತ್ರಿಸಲು ನೆಲಮಂಗಲ ಪೊಲೀಸರು ಹರಸಾಹಸ ಪಟ್ಟರು. ಬಳಿಕ ಕ್ರೇನ್​ಗಳ ಮೂಲಕ ವಾಹನಗಳನ್ನು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಓದಿ:ಅನಾಥ ಮಕ್ಕಳು, ವೃದ್ಧರೊಂದಿಗೆ ಪುನೀತ್​ ರಾಜ​ಕುಮಾರ ಜನ್ಮದಿನ ಆಚರಿಸಿದ ಅಪ್ಪು ಫ್ಯಾನ್ಸ್​

For All Latest Updates

TAGGED:

ABOUT THE AUTHOR

...view details