ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಕಿತ್ತನಗಳ್ಳಿ ಬಳಿ ಬೈಕ್ ಸವಾರರಿಬ್ಬರ ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಬೈಕ್ಗಳ ಮುಖಾಮುಖಿ ಡಿಕ್ಕಿ... ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ
ಪರಸ್ಪರ ಎದುರು ಬದುರಾಗಿ ಬೈಕ್ ಸವಾರರು ಡಿಕ್ಕಿ ಹೊಡೆದುಕೊಂಡಿರುವ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಂಗಳೂರು ಉತ್ತರ ತಾಲೂಕಿನ ಕಿತ್ತನಗಳ್ಳಿ ಬಳಿ ಈ ಘಟನೆ ನಡೆದಿದೆ.
ಮುಖಾಮುಖಿ ಎರಡು ಬೈಕ್ ಗಳ ಡಿಕ್ಕಿ ; ಓರ್ವ ಸಾವು
ಅಪಘಾತದಲ್ಲಿ ತಾರಕೇಶ್ (29) ಎಂಬಾತ ಸಾವನ್ನಪ್ಪಿದ್ದಾನೆ. ಮತ್ತೊಂದು ಬೈಕ್ನಲ್ಲಿದ್ದವನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.