ನೆಲಮಂಗಲ: ಪಟ್ಟಣ ಪಂಚಾಯತ್ ಆಗುವ ಅರ್ಹತೆ ತ್ಯಾಮಗೊಂಡ್ಲು ಪಟ್ಟಣಕ್ಕೆ ಇದ್ದು, ಸ್ಥಳೀಯರು ಸದ್ಯ ಘೋಷಣೆಯಾಗಿರುವ ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.
ತ್ಯಾಮಗೊಂಡ್ಲು ಗ್ರಾಮ ಪಂಚಾಯತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಲು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಹೈಕೋಟ್೯ನಲ್ಲಿ ವಿಚಾರಣೆ ಹಂತದಲ್ಲಿದ್ದು ಈ ಸಮಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಘೋಷಣೆಯಾಗಿದೆ.
ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕರಿಸಲು ತ್ಯಾಮಗೊಂಡ್ಲು ಜನತೆ ಸಭೆ ಸೇರಿ ಗ್ರಾಮ ಪಂಚಾಯತ್ಅನ್ನು ಪಟ್ಟಣ ಪಂಚಾಯತ್ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಲು ತೀರ್ಮಾನಿಸಿದ್ದಾರೆ. ಜೊತೆಗೆ ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಯಾರೂ ನಾಮಪತ್ರ ಸಲ್ಲಿಸಬಾರದೆಂದು ನಿರ್ಣಯ ಕೈಗೊಳ್ಳಲಾಗಿದೆ.