ಕರ್ನಾಟಕ

karnataka

ETV Bharat / state

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ : ಪ್ರಿಯಕರನ ವಿರುದ್ಧ ಕೊಲೆ ಆರೋಪ

ಮೃತ ಅಶ್ವಿನಿಯ ಚಿಕ್ಕಮ್ಮ ಅಂಬಿಕಾ ಮಾತನಾಡಿ, ಸುರೇಶ್ ದುಡ್ಡಿಗಾಗಿ ಅಶ್ವಿನಿಯನ್ನು ಪೀಡಿಸುತ್ತಿದ್ದ. 35 ಸಾವಿರ ತೆಗೆದುಕೊಂಡು ಬರುವಂತೆ ಒತ್ತಾಯಿಸುತ್ತಿದ್ದ. ಹಣ ತಂದರೆ ಮಾತ್ರ ಮನೆಗೆ ಬಾ, ಇಲ್ಲದಿದ್ದರೆ ಸತ್ತು ಹೋಗು ಎಂದು ಗಲಾಟೆ ಮಾಡಿದ್ದ. ಇದನ್ನು ಸಾಯುವ ಮುನ್ನ ಅಶ್ವಿನಿ ಹೇಳಿಕೊಂಡಿದ್ದಾಳೆ..

By

Published : Mar 14, 2021, 5:34 PM IST

Updated : Mar 14, 2021, 8:15 PM IST

Young woman dead body found in Hoskote
ಹೊಸಕೋಟೆಯಲ್ಲಿ ಮಹಿಳೆ ಮೃತದೇಹ ಪತ್ತೆ

ಹೊಸಕೋಟೆ :ಪಟ್ಟಣದ ಎಂ ವಿ ಬಡಾವಣೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

ತುಮಕೂರು ಜಿಲ್ಲೆ ಕೊರಟಗೆರೆಯ ಅಶ್ವಿನಿ (23) ಮೃತ ಯುವತಿ. ಮೂರು ದಿನಗಳ ಹಿಂದೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗ್ತಿದೆ. ಎರಡು ವರ್ಷಗಳ ಹಿಂದೆ ಅಶ್ವಿನಿಗೆ ಫೇಸ್‌ಬುಕ್‌ನಲ್ಲಿ ಆಟೋ ಚಾಲಕ ಸುರೇಶ್ ಎಂಬಾತನ ಪರಿಚಯವಾಗಿತ್ತು. ಗಾರ್ಮೆಂಟ್ಸ್‌ ಉದ್ಯೋಗಿಯಾಗಿದ್ದ ಅಶ್ವಿನಿ ಕೆಲಸಕ್ಕೆ ಹೋಗುವಾಗ ಆಟೋ ಚಾಲಕ ಸುರೇಶ್, ದಿನಾಲು ಆಕೆಯನ್ನು ಡ್ರಾಪ್ ಮಾಡುತ್ತಿದ್ದ.

ಪ್ರಿಯಕರನ ವಿರುದ್ಧ ಕೊಲೆ ಆರೋಪ ಮಾಡಿದ ಮೃತಳ ಕುಟುಂಬಸ್ಥರು

ಈ ವೇಳೆ ಇಬ್ಬರ ನಡುವೆ ಪ್ರೀತಿ ಹುಟ್ಟಿತ್ತು. ಎರಡು ತಿಂಗಳ ಹಿಂದೆ ಸುರೇಶ್ ಅಶ್ವಿನಿಯನ್ನು ಹೊಸಕೋಟೆಯಲ್ಲಿರುವ ತನ್ನ ಬಾಡಿಗೆ ಮನೆಗೆ ಕರೆತಂದು ಆಕೆಯ ಜೊತೆಗೆ ವಾಸವಿದ್ದ ಎಂದು ತಿಳಿದು ಬಂದಿದೆ.

ಓದಿ : ಫಿನಾಯಿಲ್ ಕುಡಿದು ಕೊಲೆ ಆರೋಪಿ ಸಾವು?: ಸಿಒಡಿಯಿಂದ ಪ್ರಕರಣದ ತನಿಖೆ

ಬಾಡಿಗೆ ಮನೆಯಲ್ಲಿ ವಾಸವಿದ್ದ ಅಶ್ವಿನಿ ಮತ್ತು ಸುರೇಶ್ ಇಬ್ಬರೂ ಅನ್ಯೋನ್ಯವಾಗಿದ್ದರು. ಇತ್ತೀಚೆಗೆ ಸುರೇಶ್​ ತನಗೆ ವಂಚಿಸಿರುವುದಾಗಿ ಅಶ್ವಿನಿ ಸೂಲಿಬೆಲೆ ಪೊಲೀಸರ ಮೊರೆ ಹೋಗಿದ್ದಳು. ಈ ವೇಳೆ ಅಶ್ವಿನಿ ಮತ್ತು ಸುರೇಶ್ ಅನ್ನು ಕರೆದು ಮಾತನಾಡಿಸಿದ ಪೊಲೀಸರು,‌ ಇಬ್ಬರ ನಡುವೆ ರಾಜಿ ಮಾಡಿ ಕಳಿಸಿದ್ದರು.

ಆದರೆ, ಇದೀಗ ಅಶ್ವಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೀಗಾಗಿ, ಅಶ್ವಿನಿಯನ್ನು ಸುರೇಶ್ ಕೊಲೆ ಮಾಡಿದ್ದಾನೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸುರೇಶ್​ಗಾಗಿ ಹುಡುಕಾಡುತ್ತಿದ್ದಾರೆ.

ಮೃತ ಅಶ್ವಿನಿಯ ಚಿಕ್ಕಮ್ಮ ಅಂಬಿಕಾ ಮಾತನಾಡಿ, ಸುರೇಶ್ ದುಡ್ಡಿಗಾಗಿ ಅಶ್ವಿನಿಯನ್ನು ಪೀಡಿಸುತ್ತಿದ್ದ. 35 ಸಾವಿರ ತೆಗೆದುಕೊಂಡು ಬರುವಂತೆ ಒತ್ತಾಯಿಸುತ್ತಿದ್ದ. ಹಣ ತಂದರೆ ಮಾತ್ರ ಮನೆಗೆ ಬಾ, ಇಲ್ಲದಿದ್ದರೆ ಸತ್ತು ಹೋಗು ಎಂದು ಗಲಾಟೆ ಮಾಡಿದ್ದ. ಇದನ್ನು ಸಾಯುವ ಮುನ್ನ ಅಶ್ವಿನಿ ಹೇಳಿಕೊಂಡಿದ್ದಾಳೆ.

ನಮ್ಮ ಮಗುವನ್ನು ಸುರೇಶ್ ಮೋಸ ಮಾಡಿ ಕರೆತಂದು, ಕೊಲೆ ಮಾಡಿದ್ದಾನೆ. ಈ ಮೊದಲು ಅಶ್ವಿನಿಗೆ ಮದುವೆಯಾಗಿದ್ದು, ಗಂಡನಿಂದ ದೂರವಾಗಿದ್ದಳು. ಆಕೆಗೆ ಒಂದು ಮಗು ಕೂಡ ಇದೆ. ಫೇಸ್​ಬುಕ್​ನಲ್ಲಿ ಪರಿಚಯವಾಗಿ, ಕಳೆದ 2 ತಿಂಗಳ ಹಿಂದೆ ಮದುವೆಯಾಗದೆ ಒಂದೇ ಮನೆಯಲ್ಲಿ ವಾಸವಿದ್ದರು. ದುಡ್ಡಿಗಾಗಿ ಪೀಡಿಸಿ ಕೊಲೆ ಮಾಡಿ ಪರಾರಿ ಆಗಿದ್ದಾನೆ ಎಂದು ಆರೋಪಿಸಿದ್ದಾರೆ.

Last Updated : Mar 14, 2021, 8:15 PM IST

ABOUT THE AUTHOR

...view details