ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಇಂದು ಕೂಡ ಸಾವಿನ ಸಂಖ್ಯೆ ನೂರರ ಗಡಿದಾಟಿದೆ. 24 ಗಂಟೆಯಲ್ಲಿ 114 ಮಂದಿ ಮೃತ ಪಟ್ಟಿದ್ದಾರೆ. ಈ ಮೂಲಕ 3,312 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇಂದು 4,267 ಹೊಸ ಕೊರೊನಾ ಪಾಸಿಟಿವ್ ಕೇಸ್ ಪತ್ತೆ ಯಾಗಿದ್ದು, 1,82,354 ಖಚಿತ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಇನ್ನು ಮೂರೇ ದಿನದಲ್ಲಿ 2 ಲಕ್ಷಕ್ಕೆ ಸೋಂಕಿತರ ಸಂಖ್ಯೆ ತಲುಪಲಿರುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ನಿತ್ಯ 5000- 6000 ಪ್ರಕರಣಗಳು ಪತ್ತೆಯಾಗುತ್ತಿದ್ದು, ಇದು ಹೀಗೆ ಮುಂದುವರೆದರೆ, ಮೂರೇ ದಿನದಲ್ಲಿ 2 ಲಕ್ಷ ದಾಟಿಲಿದೆ.