ಕರ್ನಾಟಕ

karnataka

ETV Bharat / state

2025ರ ಜೂನ್‌ ಹೊತ್ತಿಗೆ 175 ಕಿ.ಮೀ. ಮೆಟ್ರೋ ಮಾರ್ಗ: ಅಂಜುಂ ಪರ್ವೇಜ್‌ - ಬಿಎಂಟಿಸಿ

ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ ಅವರು ಶುಕ್ರವಾರ 'ಸಂಚಾರ ವ್ಯವಸ್ಥೆಯ ಭವಿಷ್ಯ' ವಿಚಾರಗೋಷ್ಠಿಯಲ್ಲಿ ಮಾತನಾಡಿದ ಬಿಎಂಆರ್​​ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್‌ 2025ರ ಜೂನ್‌ ಹೊತ್ತಿಗೆ 'ನಮ್ಮ ಮೆಟ್ರೋ' ಜಾಲದಲ್ಲಿ 175 ಕಿ.ಮೀ. ಉದ್ದದ ಮಾರ್ಗ ಸಿದ್ಧವಾಗಲಿದೆ ಎಂದು ಹೇಳಿದರು.

anjum parvez
ಬಿಎಂಆರ್‍‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್‌

By

Published : Nov 18, 2022, 10:50 PM IST

ಬೆಂಗಳೂರು: 2025ರ ಜೂನ್‌ ಹೊತ್ತಿಗೆ 'ನಮ್ಮ ಮೆಟ್ರೋ' ಜಾಲದಲ್ಲಿ 175 ಕಿ.ಮೀ. ಉದ್ದದ ಮಾರ್ಗ ಸಿದ್ಧವಾಗಲಿದೆ ಎಂದು ಬಿಎಂಆರ್​ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್‌ ತಿಳಿಸಿದರು.

ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ ಅವರು ಶುಕ್ರವಾರ 'ಸಂಚಾರ ವ್ಯವಸ್ಥೆಯ ಭವಿಷ್ಯ' ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಮೆಟ್ರೋದ 2 ಮತ್ತು 3ನೇ ಹಂತದ ಕಾಮಗಾರಿಗಳು ಸಂಪೂರ್ಣವಾಗಿ ಮುಗಿದರೆ, ನಗರದಲ್ಲಿ 2041ರ ಹೊತ್ತಿಗೆ ಒಟ್ಟು 314 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ಸಿದ್ಧವಾಗಲಿದೆ.

ಸದ್ಯಕ್ಕೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಮೆಟ್ರೋ ಕಾಮಗಾರಿ ಭರದಿಂದ ಸಾಗುತ್ತಿದೆ. ಆದರೆ ಸ್ವಂತ ವಾಹನಗಳನ್ನು ಬಿಟ್ಟು ಸಾರ್ವಜನಿಕ ಸಾರಿಗೆಯ ಕಡೆಗೆ ಜನರನ್ನು ಕರೆತರುವುದೇ ದೊಡ್ಡ ಸವಾಲಾಗಿದೆ ಎಂದರು.

1990ರವರಗೂ ದೇಶದಲ್ಲಿ ನಗರ ಪ್ರದೇಶಗಳ ಕಡೆಗೆ ಗಮನವನ್ನೇ ಕೊಡುತ್ತಿರಲಿಲ್ಲ. ಹೀಗಾಗಿ ನಮ್ಮ ನಗರಾಭಿವೃದ್ಧಿ ಯೋಜನೆಗಳು ಬಹುಕಾಲ ವೈಜ್ಞಾನಿಕವಾಗಿರಲಿಲ್ಲ. ಈಗ ನವೋದ್ಯಮಗಳಿಂದ ಮೆಟ್ರೋ ವ್ಯವಸ್ಥೆಗೆ ಸಾಕಷ್ಟು ಅನುಕೂಲಗಳು ಸಿಗುತ್ತಿವೆ. ಹೀಗಾಗಿ ಜನರು ಮೆಟ್ರೋ ರೈಲುಗಳ ಮೂಲಕ ತಮ್ಮ ಕಾರ್ಯಸ್ಥಳಗಳನ್ನು ತಲುಪುವಂತೆ ಮಾಡಲು ಹಲವು ನವೋದ್ಯಮಗಳೊಂದಿಗೆ ಬಿಎಂಆರ್ ಸಿಎಲ್‌ ಒಡಂಬಡಿಕೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ವಿವರಿಸಿದರು.

ಬಿಎಂಟಿಸಿ ಜತೆ ಮಾತುಕತೆ: ಮೆಟ್ರೋ ನಿಲ್ದಾಣಗಳಲ್ಲೇ ಬಸ್‌ ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸುವಂತೆ ಬಿಎಂಟಿಸಿ ಜತೆ ಮಾತುಕತೆ ಪ್ರಗತಿಯಲ್ಲಿದೆ. ಇದರಿಂದ ಆ ಸಂಸ್ಥೆಗೂ ಲಾಭವಾಗಲಿದೆ. ಇದರ ಜತೆಗೆ ಕಾರು ಮತ್ತು ಬೈಕ್‌ ಪೂಲಿಂಗ್‌ ವ್ಯವಸ್ಥೆಯನ್ನು ಉತ್ತೇಜಿಸಬೇಕು. ಅಲ್ಲದೇ, ಮೆಟ್ರೋ ನಿಲ್ದಾಣಗಳ ಒಳಗೆ ಮತ್ತು ಹೊರಗೆ ಸಾರ್ವಜನಿಕರಿಗೆ ಪ್ರತಿಯೊಂದೂ ಸಿಗುವಂತಿರಬೇಕು. ಇದನ್ನು ಸಾಧ್ಯವಾಗಿಸುವ ನಿಟ್ಟಿನಲ್ಲಿ ಸಂಸ್ಥೆಯು ಯೋಚಿಸುತ್ತಿದೆ ಎಂದು ಪರ್ವೇಜ್‌ ನುಡಿದರು.

ಅಂತಾರಾಷ್ಟ್ರೀಯ ಸಾರಿಗೆ ಕೌನ್ಸಿಲ್‌ನ ಅಮಿತ್‌ ಭಟ್‌ ಮಾತನಾಡಿ, "ಪಾಶ್ಚಾತ್ಯ ಜಗತ್ತಿನಲ್ಲಿ ಶೇಕಡ 85ರಷ್ಟು ನಗರೀಕರಣವಾಗಿದ್ದು, ಭಾರತದಲ್ಲಿ ಈ ಪ್ರಮಾಣ ಶೇಕಡ 33ರಷ್ಟಿದೆ. ಆದರೆ, ನಮ್ಮಲ್ಲಿ ಇನ್ನೂ ಶೇಕಡ 66ರಷ್ಟು ಮೂಲಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಬೇಕಾಗಿದೆ. ಏಕೆಂದರೆ, ನಮ್ಮಲ್ಲಿ ಹೊಸದಾಗಿ ಹಲವು ನಗರಗಳು ತಲೆ ಎತ್ತುತ್ತಿವೆ" ಎಂದರು.

ಸುಗಮ ಮತ್ತು ಅತ್ಯಾಧುನಿಕ ಸಾರಿಗೆ ಸೌಲಭ್ಯವನ್ನು ಒದಗಿಸುವಾಗ ಇಂಗಾಲದ ಉತ್ಪಾದನೆ ಇಲ್ಲದಂತೆ ನೋಡಿಕೊಳ್ಳುವುದು, ಎಲ್ಲರನ್ನೂ ಒಳಗೊಳ್ಳುವುದು ಮತ್ತು ಯಾವುದೇ ಅಪಘಾತಗಳಿಗೆ ಆಸ್ಪದವಿಲ್ಲದಂತೆ ಖಾತ್ರಿಪಡಿಸುವುದು ಬಹಳ ದೊಡ್ಡ ಸವಾಲುಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ:ಸ್ಟಾರ್ಟ್​ ಅಪ್‌ಗಳ ನೆರವಿಗೆ ಬೂಸ್ಟರ್ ಕಿಟ್‌ ಉಪಕ್ರಮ, 9 ಒಡಂಬಡಿಕೆಗೆ ಅಂಕಿತ

ABOUT THE AUTHOR

...view details