ಕರ್ನಾಟಕ

karnataka

ರಾಜ್ಯದಲ್ಲಿ ಇಂದು 1,889 ಮಂದಿಯಲ್ಲಿ ಕೋವಿಡ್ ದೃಢ: ಕೋವಿಡ್ ಸೋಂಕಿಗೆ ಮೂವರು ಬಲಿ

By

Published : Jul 28, 2022, 10:17 PM IST

ರಾಜ್ಯದಲ್ಲಿ ಇಂದು 1889 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 1587 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಇಂದು ಸೋಂಕಿಗೆ 3 ಜನ ಬಲಿಯಾಗಿದ್ದಾರೆ.

ಕೊರೊನಾ
ಕೊರೊನಾ

ಬೆಂಗಳೂರು: ರಾಜ್ಯದಲ್ಲಿ ನಿಧಾನಗತಿಯಲ್ಲಿ ಕೋವಿಡ್ ಸೋಂಕು ಏರಿಕೆಯಾಗುತ್ತಿದೆ. ಇಂದು 31706 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1889 ಮಂದಿಗೆ ಸೋಂಕು ದೃಢಪಟ್ಟಿದೆ. ಇಂದು 1587 ಮಂದಿ ಡಿಸ್ಜಾರ್ಜ್ ಆಗಿದ್ದು, ಒಟ್ಟು 39,52,381 ಮಂದಿ ಗುಣಮುಖರಾಗಿದ್ದಾರೆ. ಇಂದು ಕೋವಿಡ್ ಗೆ ಮೂವರು ಮೃತಪಟ್ಟಿದ್ದಾರೆ.

ಸದ್ಯ ಸಕ್ರಿಯ ಪ್ರಕರಣಗಳು 9,135 ಕ್ಕೆ ಏರಿಕೆಯಾಗಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ. 5.94 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 5.54 ರಷ್ಟಿದೆ. ಇಲ್ಲಿಯವರೆಗೂ ಪರಿಕ್ಷೀಸಲಾದ ಒಟ್ಟು ಸಂಖ್ಯೆ 67703537. ವಾರದ ಸಾವಿನ ಪ್ರಮಾಣ ಶೇ. 0.06 ರಷ್ಟಿದೆ. ವಿಮಾನ ನಿಲ್ದಾಣದಿಂದ ಇಂದು ತಪಾಸಣೆಗೆ 5,203 ಒಳಗಾಗಿದ್ದು, ಇದುವರೆಗೂ 1288513 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು 1475 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 18,31,957 ಕ್ಕೆ ಏರಿಕೆ ಆಗಿದೆ. ಇಂದು 1288 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 18,07, 497 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಇಂದು ಬೆಂಗಳೂರಿನಲ್ಲಿ ಕೋವಿಡ್ ಸಾವಿನ ಸಂಖ್ಯೆ ಶೂನ್ಯ. ಇನ್ನು ಸಕ್ರಿಯ ಪ್ರಕರಣಗಳು 7,486 ಇದೆ. ಇದುವರೆಗೂ ಕೋವಿಡ್ ಸಾವಿನ ಸಂಖ್ಯೆ 16,973 ರಷ್ಟಿದೆ.

ಇದನ್ನೂ ಓದಿ:ಪಾತಾಳಕ್ಕೆ ಟೊಮೇಟೊ ಬೆಲೆ: ಮಾರುಕಟ್ಟೆಗಳಲ್ಲಿ ಮಣ್ಣು, ದನಗಳ ಪಾಲಾಗುತ್ತಿದೆ ಬೆಳೆ

ABOUT THE AUTHOR

...view details